ರಾಜ್ಯ ಗುಪ್ತಚರ ಇಲಾಖೆ ನಿರ್ದೇಶಕ ಹೇಮಂತ್ ನಿಂಬಾಳ್ಕರ್ಗೆ ಮುಖ್ಯಮಂತ್ರಿ ಪದಕ ಪ್ರದಾನ
Update: 2025-04-02 12:45 IST
ಬೆಂಗಳೂರು : ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರವಹಿಸಿದ ರಾಜ್ಯ ಗುಪ್ತಚರ ಇಲಾಖೆಯ ನಿರ್ದೇಶಕ ಹೇಮಂತ್ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಎ.2) ಮುಖ್ಯಮಂತ್ರಿ ಪದಕವನ್ನು ಪ್ರದಾನ ಮಾಡಿದ್ದಾರೆ.
ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕವನ್ನು ಪ್ರದಾನ ಮಾಡಿದರು.