ಮಾಲೂರು ಕ್ಷೇತ್ರದ ಶಾಸಕ ಕೆ.ವೈ.ನಂಜೇಗೌಡ ಅನರ್ಹತೆ ಕೋರಿದ್ದ ಅರ್ಜಿ ಮುಂದೂಡಿಕೆ

Update: 2024-08-15 13:42 GMT

ಬೆಂಗಳೂರು : 2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದಿಂದ ಶಾಸಕರಾಗಿ ಕೆ.ವೈ.ನಂಜೇಗೌಡ ಆಯ್ಕೆಯಾಗಿರುವುದನ್ನು ಅನೂರ್ಜಿತಗೊಳಿಸಬೇಕು ಎಂದು ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ಮುಂದೂಡಿದೆ.

ಬಿಜೆಪಿ ಪರಾಜಿತ ಅಭ್ಯರ್ಥಿ ಕೆ.ಎಸ್‌. ಮಂಜುನಾಥ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಆರ್.ದೇವದಾಸ್ ಅವರದ್ದ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಮತ ಎಣಿಕೆಗೆ ಸಂಬಂಧಿಸಿದಂತೆ ಮೂರು ಸೀಡಿ ಲಭ್ಯವಿದೆ. ಹಾಗೇಯೆ, ಫಾರ್ಮ್ 17 ಪ್ರತಿ ಲಭ್ಯವಾಗಿಲ್ಲ. ಅದನ್ನು ಶೋಧಿಸಿ ಕೋರ್ಟ್ ಗೆ ಸಲ್ಲಿಸಲು ಕಾಲಾವಾಕಾಶ ನೀಡಬೇಕು ಎಂದು ಕೇಂದ್ರ ಚುನಾವಣಾ ಆಯೋಗದ ಪರ ವಕೀಲರಿಂದ ಹೈಕೋರ್ಟ್ ಗೆ ಮಾಹಿತಿ ನೀಡಿದರು.

ಈ ಮನವಿಯಂತೆ ಮತ ಎಣಿಕೆ ಕಾರ್ಯವನ್ನು ಚೀತ್ರೀಕರಿಸಿರುವ ಸೀಡಿ ಹಾಗೂ ಫಾರ್ಮ್ ನಂ17 ಅನ್ನು ಆ.19ಕ್ಕೆ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News