ʼಹನಿಟ್ರ್ಯಾಪ್ ಪ್ರಕರಣʼ ಹೈಕಮಾಂಡ್‌ ರಂಗಪ್ರವೇಶ?

Update: 2025-03-29 00:32 IST
ʼಹನಿಟ್ರ್ಯಾಪ್ ಪ್ರಕರಣʼ ಹೈಕಮಾಂಡ್‌ ರಂಗಪ್ರವೇಶ?

 ರಣದೀಪ್ ಸಿಂಗ್ ಸುರ್ಜೆವಾಲಾ | PC : PTI

  • whatsapp icon

ಬೆಂಗಳೂರು : ಆಡಳಿತಾರೂಢ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ‘ಹನಿಟ್ರ್ಯಾಪ್’ ವಿಚಾರ ಪಕ್ಷಕ್ಕೆ ತೀವ್ರ ಮುಜುಗರ ಸೃಷ್ಟಿಸಿದ್ದು, ಈ ಗೊಂದಲ ನಿವಾರಣೆಗೆ ಇದೀಗ ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ಪ್ರವೇಶವಾಗಿದೆ.

ಖುದ್ದು ಸಹಕಾರ ಸಚಿವ ಕೆ.ಎನ್.ರಾಜಣ್ಣ ವಿಧಾನಸಭೆ ಅಧಿವೇಶನದಲ್ಲೇ ‘ಹನಿಟ್ರ್ಯಾಪ್’ ವಿಷಯದ ಕುರಿತು ಪ್ರಸ್ತಾಪ ಮಾಡಿದ್ದರು. ಈ ಪ್ರಕರಣದಲ್ಲಿ ಯಾರೊಬ್ಬರ ಹೆಸರನ್ನು ಉಲ್ಲೇಖಿಸಿದೆ, ಕಾಂಗ್ರೆಸ್ ಪಕ್ಷದಲ್ಲಿ ಪ್ರಭಾವಿ ಮುಖಂಡರೊಬ್ಬರ ಕೈವಾಡವಿದೆ ಎಂದು ಪರೋಕ್ಷವಾಗಿ ಆರೋಪ ಮಾಡಿದ್ದಾರೆ.

ಈ ಬೆಳವಣಿಗೆಗಳ ಮಧ್ಯೆ ಎಐಸಿಸಿ ಮುಖಂಡರು, ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸಿದ್ದಾರೆ. ಅಲ್ಲದೆ, ತನಿಖೆ ಸೇರಿದಂತೆ ಈ ಗೊಂದಲ ನಿವಾರಣೆಗೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆಯೂ ಸಮಾಲೋಚನೆ ನಡೆಸಿದ್ದಾರೆ. ಇದೀಗ ಇದರ ಮುಂದುವರಿದ ಭಾಗವಾಗಿಯೇ ಹೈಕಮಾಂಡ್ ನಾಯಕರು ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಕರ್ನಾಟಕಕ್ಕೆ ತೆರಳಿ ಮಾತುಕತೆ ನಡೆಸುವಂತೆ ಸೂಚಿಸಿದೆ ಎಂದು ಗೊತ್ತಾಗಿದೆ.

ವರಿಷ್ಠರ ಸೂಚನೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಈ ವಾರ ಆಗಮಿಸಲಿರುವ ರಣದೀಪ್ ಸಿಂಗ್ ಸುರ್ಜೇವಾಲಾ, ಪಕ್ಷದ ಪ್ರಮುಖ ನಾಯಕರು ಹಾಗೂ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಇನ್ನಿತರ ಮುಖಂಡ ಜತೆ ಸಭೆ ನಡೆಸಿದ್ದಾರೆ. ಹನಿಟ್ರ್ಯಾಪ್ ವಿಚಾರ ಪಕ್ಷಕ್ಕೆ ತೀವ್ರ ಮುಜುಗರ ಸೃಷ್ಟಿಸಿರುವುದರಿಂದ ಕೆಲವು ಸಲಹೆ, ಸೂಚನೆಗಳನ್ನು ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News