‘ಹನಿಟ್ರ್ಯಾಪ್’ ಪ್ರಕರಣ ಸೂಕ್ಷ್ಮವಾದದ್ದು: ಡಾ.ಜಿ.ಪರಮೇಶ್ವರ್
Update: 2025-03-22 23:20 IST

ಡಾ.ಜಿ.ಪರಮೇಶ್ವರ್
ಬೆಂಗಳೂರು : ಹನಿಟ್ರ್ಯಾಪ್ ಪ್ರಕರಣ ಅತ್ಯಂತ ಸೂಕ್ಷ್ಮವಾಗಿದ್ದು, ನಾನು ಯಾವುದೇ ರೀತಿಯ ಪ್ರತಿಕ್ರಿಯೆಗಳನ್ನು ನೀಡುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ಪ್ರಕರಣದಲ್ಲಿ ಬಹಳ ಸೂಕ್ಷ್ಮ ಪ್ರಶ್ನೆಗಳು ಉದ್ಭವಿಸುತ್ತವೆ. ಏಕಾಏಕಿ ಎದುರಾಗುವ ಪ್ರಶ್ನೆಗಳಿಗೆ ಉತ್ತರಿಸುವುದು ಸರಿಯಲ್ಲ. ತುಂಬಾ ಸೆನ್ಸಿಟಿವಿಟಿ ಇದೆ. ಕರ್ನಾಟಕ ಬಂದ್ಗೆ ಸಂಬಂಧಿಸಿದಂತೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.