ಸಾಕ್ಷಿ ವಿಚಾರಣೆಗೂ, ಆರೋಪಿ ವಿಚಾರಣೆಗೂ ವ್ಯತ್ಯಾಸ ತಿಳಿಯದ ಅಜ್ಞಾನಿಗಳು : ಕಾಂಗ್ರೆಸ್‌ಗೆ ತಿರುಗೇಟು ನೀಡಿದ ಬಿಜೆಪಿ

Update: 2024-04-05 15:23 GMT

ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲಿ ಸಾಕ್ಷಿ ವಿಚಾರಣೆ ಮಾಡುವುದಕ್ಕೂ, ಆರೋಪಿ ವಿಚಾರಣೆ ಮಾಡುವುದಕ್ಕೂ ವ್ಯತ್ಯಾಸ ತಿಳಿಯದ ಅಜ್ಞಾನಿಗಳು ಕಾಂಗ್ರೆಸ್‍ನ ಪಾಕೈಂಡಿಗಳು ಎಂದು ರಾಜ್ಯ ಬಿಜೆಪಿ ತಿರುಗೇಟು ನೀಡಿದೆ.

ಈ ಬಗ್ಗೆ ಕಾಂಗ್ರೆಸ್ ವಿರುದ್ಧ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಸುಳ್ಳು ಸುದ್ದಿ ಹರಡುತ್ತಿದ್ದ ಐಟಿ ಸೆಲ್ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಅವರನ್ನು ಆ ಸ್ಥಾನದಿಂದ ಕಿತ್ತು ಬಿಸಾಡಿದರೂ ಕಾಂಗ್ರೆಸ್ ಐಟಿ ಸೆಲ್ ಸುಳ್ಳು ಸುದ್ದಿ ಹರಡುವ ತನ್ನ ಮೊಣಕಾಲು ಕೆಳಗಿನ ಬುದ್ಧಿ ಬಿಟ್ಟಿಲ್ಲ ಎಂದು ಹೇಳಿದೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲಿ ಕಾಂಗ್ರೆಸ್ ಸುಳ್ಳು ಸುದ್ದಿ ಹರಡಿ ಬ್ರದರ್ಸ್‍ಗಳನ್ನು ರಕ್ಷಣೆ ಮಾಡಲು ಮುಂದಾಗಿದೆ ಎಂದು ಬಿಜೆಪಿ ಆರೋಪಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News