ಲೋಕಸಭಾ ಚುನಾವಣೆ: ಬಳ್ಳಾರಿಯಲ್ಲಿ 20 ಲಕ್ಷ ರೂ.ನಗದು ವಶ

Update: 2024-03-26 14:45 GMT

ಸಾಂದರ್ಭಿಕ ಚಿತ್ರ

ಬೆಂಗಳೂರು: ಬಳ್ಳಾರಿ ಲೋಕಸಭಾ ಕ್ಷೇತ್ರದ ಸಿದ್ದಾಪುರ ಚೆಕ್‍ಪೋಸ್ಟ್ ನಲ್ಲಿ ಸ್ಥಿರ ಕಣ್ಗಾವಲು ತಂಡದವರು 20 ಲಕ್ಷ ರೂ.ನಗದು ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಅಣ್ಣೀಗೇರಿ ಪೊಲೀಸ್ ಠಾಣೆಯ ತಂಡದವರು 15.36 ಲಕ್ಷ ರೂ.ಮೌಲ್ಯದ ಸೀರೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿಯ ಪ್ರಕಟಣೆ ತಿಳಿಸಿದೆ.

ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ಲೋಹ ಮತ್ತು ಉಚಿತ ಉಡುಗೊರೆ ವಶಪಡಿಸಿಕೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ 760 ಎಫ್‍ಐಆರ್ ಗಳನ್ನು ದಾಖಲಿಸಿದ್ದಾರೆ.

89,624 ಶಸ್ತ್ರಾಸ್ತ್ರಗಳನ್ನು ಠೇವಣಿ ಮಾಡಲಾಗಿದೆ. 850 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 14 ಶಸ್ತ್ರಾಸ್ತ್ರಗಳ ಪರವಾನಗಿಯನ್ನು ರದ್ದುಪಡಿಸಲಾಗಿದೆ. ಸಿಆರ್‍ಪಿಸಿಯ ತಡೆಗಟ್ಟುವ ವಿಭಾಗಗಳ ಅಡಿಯಲ್ಲಿ 6,834 ಪ್ರಕರಣಗಳನ್ನು ದಾಖಲಿಸಲಾಗಿದೆ.

ಅಬಕಾರಿ ಇಲಾಖೆಯು ಘೋರ ಅಪರಾಧ ಅಡಿಯಲ್ಲಿ 765 ಪ್ರಕರಣಗಳನ್ನು ದಾಖಲಿಸಿದೆ. ಪರವಾನಗಿ ಉಲ್ಲಂಘನೆ ಅಡಿಯಲ್ಲಿ 597 ಪ್ರಕರಣ ದಾಖಲಿಸಿದೆ. ಎನ್‍ಡಿಪಿಎಸ್ ಅಡಿಯಲ್ಲಿ 43 ಪ್ರಕರಣಗಳನ್ನು ಮತ್ತು ಕರ್ನಾಟಕ ಅಬಕಾರಿ ಕಾಯ್ದೆ ಅಡಿ 2,636 ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು 452 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News