ಬಸ್ ಪ್ರಯಾಣ ದರ ಏರಿಕೆ ಮಾಡಲ್ಲ : ಸಚಿವ ರಾಮಲಿಂಗಾರೆಡ್ಡಿ

Update: 2024-07-15 15:53 GMT

ಬೆಂಗಳೂರು : ರಾಜ್ಯ ವ್ಯಾಪಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಯಾವುದೇ ರೀತಿಯ ಪ್ರಸ್ತಾವನೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ರಾಜುಕಾಗೆ ಅವರು ಪ್ರಯಾಣ ದರ ಏರಿಕೆ ಬಗ್ಗೆ ಹೇಳಿಕೆ ನೀಡಿರುವುದು ಅವರ ವೈಯಕ್ತಿಕ ಅಭಿಪ್ರಾಯ. ಆದರೆ, ಸದ್ಯ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ಇಲ್ಲ ಎಂದು ತಿಳಿಸಿದರು.

ಇನ್ನೂ, ಮುಡಾ ಹಗರಣ ಸಂಬಂಧ ಬಿಜೆಪಿ ಅವರು ಮಾತನಾಡುತ್ತಾರೆ. ಆದರೆ, ಹಗರಣ ನಡೆದಿರುವುದು ಯಾರ ಕಾಲದಲ್ಲಿ?. ಆಗ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದರು. ಬಿಜೆಪಿಯವರೇ ಸಚಿವರಾಗಿದ್ದರು. ಮುಡಾ ಅಧ್ಯಕ್ಷರು ಬಿಜೆಪಿಯವರೇ. ಹಗರಣಕ್ಕೆ ಬಿಜೆಪಿಯವರೇ ಕಾರಣ ಎಂದು ಆರೋಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News