ನೇಹಾ ಹತ್ಯೆ ಪ್ರಕರಣ | ನಾಳೆ(ಎ.23) ಮೊಂಬತ್ತಿ ಹಚ್ಚಿ ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆ

Update: 2024-04-22 14:42 GMT

ನೇಹಾ ಹಿರೇಮಠ

ಬೆಂಗಳೂರು : ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಮಂಗಳವಾರ(ಎ.23) ರಾಜ್ಯಾದ್ಯಂತ ಮೊಂಬತ್ತಿ ಹಚ್ಚಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಸಿ.ಮಂಜುಳಾ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ನಡೆದ ಅನಾಗರಿಕ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇವೆ. ಕೊಲೆ ಪಕ್ರರಣವನ್ನು ಖಂಡಿಸಿ ಮಂಗಳವಾರ ಸಂಜೆ 6 ಗಂಟೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಹಿಳಾ ಮೋರ್ಚಾ ವತಿಯಿಂದ ಮೊಂಬತ್ತಿ (ಕ್ಯಾಂಡಲ್) ಹಚ್ಚಿ ಪ್ರತಿಭಟನಾ ಸಭೆ ನಡೆಸಲಾಗುವುದು ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನೇ ಹೆಚ್ಚುತ್ತಿವೆ. ಸರಕಾರದ ಮುಖ್ಯಸ್ಥರು ಮತ್ತು ಸಚಿವರು ತನಿಖೆಗೂ ಮೊದಲೇ ಕ್ಷುಲ್ಲಕ ಹೇಳಿಕೆ ಕೊಟ್ಟು ತನಿಖೆಯ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News