ಜಾಗತಿಕ ಸಾಹಿತ್ಯ ಪ್ರಶಸ್ತಿ ಪಡೆದ ಕವಯತ್ರಿ‌ ಡಾ.ಮಮ್ತಾ ಸಾಗರ್ ಗೆ ಸಿಎಂ ಅಭಿನಂದನೆ

Update: 2024-04-12 16:14 GMT

ಬೆಂಗಳೂರು: ಜಾಗತಿಕ ಸಾಹಿತ್ಯ ಪ್ರಶಸ್ತಿ ಪಡೆದ ಕವಯತ್ರಿ ಡಾ.ಮಮ್ತಾ ಸಾಗರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಇತ್ತೀಚಿಗೆ ನೈಜೀರಿಯಾದ ಅಬುಜ ನಗರದಲ್ಲಿ ಜಾಗತಿಕ ಬರಹಗಾರರ ಒಕ್ಕೂಟ ಆಯೋಜಿಸಿದ್ದ 7ನೇ ಅಂರ್ ರಾಷ್ಟ್ರೀಯ ಸಾಹಿತ್ಯೋತ್ಸವದಲ್ಲಿ ಜಾಗತಿಕ ಸಾಹಿತ್ಯ ಪ್ರಶಸ್ತಿ ಪಡೆದ ಬಳಿಕ ಕವಯತ್ರಿ ಡಾ.ಮಮ್ತಾ ಸಾಗರ್ ಚಿನ್ನದ ಪದಕ ಮತ್ತು ಪ್ರಶಸ್ತಿ ಪತ್ರ ಸಮೇತ ಶುಕ್ರವಾರ ಇಲ್ಲಿನ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ‌ ಅವರನ್ನು ಭೇಟಿಯಾದರು.

ಎ.4 ರಿಂದ 6ರ ವರೆಗೆ ನೈಜೀರಿಯಾದ ಅಬುಜ ನಗರದಲ್ಲಿ ಜಾಗತಿಕ ಬರಹಗಾರರ ಒಕ್ಕೂಟ ಆಯೋಜಿಸಿದ್ದ 7ನೇ ಅಂತರ್ ರಾಷ್ಟ್ರೀಯ ಸಾಹಿತ್ಯೋತ್ಸವದಲ್ಲಿ ಮಮ್ತಾ ಸಾಗರ್ ಅವರು ಜಾಗತಿಕ ಸಾಹಿತ್ಯ ಪ್ರಶಸ್ತಿ ಪಡೆದಿರುವುದು ನಾಡಿಗೆ ಹೆಮ್ಮೆಯ ವಿಚಾರ. ವೈವಿಧ್ಯತೆಯನ್ನು ಸಂಭ್ರಮಿಸುವ ಮೂಲಕ ಹೊಸ ಏಕತೆಯ ಕುರಿತು ಚಿಂತಿಸುವ ಅಗತ್ಯವಿದೆ ಎಂದು ಅಂತರ್‍ರಾಷ್ಟ್ರೀಯ ವೇದಿಕೆಯಲ್ಲಿ ನಿಂತು ಮಮ್ತಾ ಸಾಗರ್ ಅವರು ಜಗತ್ತಿಗೆ ಕರೆಕೊಟ್ಟಿದ್ದನ್ನು ಈ ಸಂದರ್ಭದಲ್ಲಿ ನೆನೆಯುತ್ತೇನೆ ಎಂದು ಎಕ್ಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News