ಪತ್ರಕರ್ತ ವೆಂಕಟೇಶ ಸಂಪ ಅವರಿಗೆ ʼಕಾಯಕ ಸಾಮ್ರಾಟ್ʼ ಪ್ರಶಸ್ತಿ

Update: 2024-09-23 13:16 GMT

ಬೆಂಗಳೂರು : ಬೆಳಕು ಸಾಹಿತ್ಯಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್(ರಿ) ನೀಡುವ ರಾಷ್ಟ್ರಮಟ್ಟದ ʼಕಾಯಕ ಸಾಮ್ರಾಟ್ʼ ಪ್ರಶಸ್ತಿಯನ್ನು ಪತ್ರಕರ್ತ, ಸಂಪದ ಸಾಲು ಪತ್ರಿಕೆ ಸಂಪಾದಕ, ವೆಂಕಟೇಶ ಎಸ್. ಸಂಪ ಅವರಿಗೆ ಸೆ.29ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಪ್ರದಾನ ಮಾಡಲಾಗುವುದು ಎಂದು ಹಿರಿಯ ಸಾಹಿತಿ, ಬೆಳಕು ಸಂಸ್ಥೆಯ ಮುಖ್ಯಸ್ಥ ಅಣ್ಣಪ್ಪ ಮೇಟಿಗೌಡ ತಿಳಿಸಿದ್ದಾರೆ.

ವೆಂಕಟೇಶ ಸಂಪ ಅವರು ಕಳೆದ 17 ವರ್ಷಗಳಿಂದ ಸಂಪದ ಸಾಲು ಪತ್ರಿಕೆ ನಡೆಸುತ್ತಿದ್ದು, ಅವರ ಕತೆ, ಕವನ, ಲೇಖನಗಳು ರಾಜ್ಯದ ಎಲ್ಲಾ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಪ ಅವರು ಟಿವಿ, ರೇಡಿಯೋಗಳಲ್ಲಿ ಕಾರ್ಯಕ್ರಮಗಳನ್ನು ನೆಡೆಸಿಕೊಟ್ಟಿದ್ದು, ಸಿನಿಮಾ ಧಾರವಾಹಿಗಳಲ್ಲಿ ನಟಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಡಾ.ಮಹೇಶ್ವರ ಸ್ವಾಮಿಗಳು, ಮ.ನೀ.ಪ್ರ ಕಲ್ಯಾಣ ಸ್ವಾಮಿಗಳು, ಹೊಸಪೇಟೆ ಕ್ಷೇತ್ರದ ಶಾಸಕರಾದ ಎಚ್.ಆರ್ ಗವಿಯಪ್ಪ, ಬರಹಗಾರರಾದ ಕುಮಾರಸ್ವಾಮಿ ಹಿರೇಮಠ್ ಭಾಗವಹಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News