ಬಿಬಿಎಂಪಿ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿ : ಪ್ರಕರಣ ದಾಖಲು
Update: 2024-10-12 15:02 GMT
ಬೆಂಗಳೂರು: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರ ಭಾವಚಿತ್ರ ಬಳಸಿಕೊಂಡು ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿದ ಆರೋಪದಡಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿರುವುದಾಗಿ ವರದಿಯಾಗಿದೆ.
ಈ ಬಗ್ಗೆ ಬಿಬಿಎಂಪಿ ಕಚೇರಿಯಿಂದ ದೂರು ನೀಡಿದ ಹಿನ್ನೆಲೆಯಲ್ಲಿ ಸೈಬರ್ ವಂಚಕರ ವಿರುದ್ಧ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ.
ಇನ್ನು ಇತ್ತೀಚೆಗೆ ಮಾಜಿ ಶಾಸಕ ಶ್ರೀರಾಮುಲು ಅವರ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ ಮತ್ತು ಇನ್ಸ್ ಸ್ಟಾಗ್ರಾಂ ಖಾತೆಗಳನ್ನು ಹ್ಯಾಕ್ ಮಾಡಲಾಗಿತ್ತು.