ಬೆಂಗಳೂರು | ಕಟ್ಟಡ ದುರಂತ ಪ್ರಕರಣ : ಅವಶೇಷ ತೆರವು ವೇಳೆ ಮತ್ತೊಂದು ಮೃತದೇಹ

Update: 2024-10-25 17:02 GMT

ಬೆಂಗಳೂರು : ಇಲ್ಲಿನ ಬಾಬುಸಾಬ್ ಪಾಳ್ಯದಲ್ಲಿನ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ ಮತ್ತೋಂದು ಮೃತದೇಹ ಪತ್ತೆಯಾಗಿದ್ದು, ಮೃತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಶುಕ್ರವಾರವೂ ಮುಂದುವರೆದ ಕಾರ್ಯಾಚರಣೆ ಸಂದರ್ಭದಲ್ಲಿ ಅವಶೇಷಗಳಡಿ ಮೃತದೇಹ ಪತ್ತೆಯಾಗಿದೆ. ತಮಿಳುನಾಡಿನ ಏಳುಮಲೈ ಎಂಬ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಹಿರಿಯ  ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಮಂಗಳವಾರ ಮಧ್ಯಾಹ್ನ 6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು, ಕಾರ್ಮಿಕರು ಅವಶೇಷಗಳಡಿ ಸಿಲುಕಿ ಮೃತರಾದ ಘಟನೆ ನಡೆದಿತ್ತು. ಘಟನೆ ಬೆನ್ನಲ್ಲೇ ಅಗ್ನಿಶಾಮಕ ಮತ್ತು ತುರ್ತು ವಿಭಾಗ ದಳ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳು, ಪೊಲೀಸರು ಮೂರು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News