ಬಿಜೆಪಿ- ಜೆಡಿಎಸ್ ಒಂದಾದ ಕಾರಣಕ್ಕೆ ನಮ್ಮ ಫಲಿತಾಂಶದಲ್ಲಿ ವ್ಯತ್ಯಾಸವಾಗಿದೆ : ಕೆ.ಎಚ್.ಮುನಿಯಪ್ಪ

Update: 2024-06-05 09:58 GMT

ಬೆಂಗಳೂರು: ಸ್ಥಳೀಯವಾಗಿ ಕೆಲವರು ಪಕ್ಷದ ಪರವಾಗಿ ಒಟ್ಟಾಗಿ ಕೆಲಸ ಮಾಡಿಲ್ಲ. ಬಿಜೆಪಿ- ಜೆಡಿಎಸ್ ಒಂದಾದ ಕಾರಣಕ್ಕೆ ನಮ್ಮ ಫಲಿತಾಂಶದಲ್ಲಿ ವ್ಯತ್ಯಾಸವಾಗಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼರಾಜ್ಯದಲ್ಲಿ ನಮಗೆ 15ರಿಂದ 20 ಸ್ಥಾನಗಳು ಸಿಗಬಹುದು ಎಂಬ ನಿರೀಕ್ಷೆ ಇತ್ತು. ಕೋಲಾರ, ಚಿಕ್ಕಬಳ್ಳಾಪುರ ಮಾತ್ರವಲ್ಲ ರಾಜ್ಯದ ಕೆಲವು ಕಡೆ ಫಲಿತಾಂಶದಲ್ಲಿ ವ್ಯತ್ಯಾಸವಾಗಿದೆ. ಸ್ಥಳೀಯವಾಗಿ ಕೆಲವರು ಒಟ್ಟಾಗಿ ಕೆಲಸ ಮಾಡಿಲ್ಲ. ಈ ಕಾರಣಕ್ಕೂ ಫಲಿತಾಂಶದಲ್ಲಿ ವ್ಯತ್ಯಾಸವಾಗಿದೆʼ ಎಂದರು.

ಕೋಲಾರ ಲೋಕಸಭಾ ಕ್ಷೇತ್ರದ ಸೋಲಿನ ಕುರಿತು ಪ್ರತಿಕ್ರಿಯಿಸಿದ ಮುನಿಯಪ್ಪ,ʼಯಾರು ನಮ್ಮ‌ ಕುಟುಂಬಕ್ಕೆ ಟಿಕೆಟ್ ಕೊಡಬಾರದು ಎಂದಿದ್ದರೊ ಅವರು ಹೇಳಬೇಕು. ಜವಾಬ್ದಾರಿ ತೆಗೆದುಕೊಂಡ ಜನರು ಇದಕ್ಕೆ ಉತ್ತರ ಹೇಳಬೇಕು. ಮುನಿಯಪ್ಪಗೆ ಬೇಡ ನಾವು ಗೆಲ್ಲಿಸಿಕೊಂಡು ಬರುತ್ತೇವೆ ಎಂದಿದ್ದರು. ಅವರನ್ನು ನಾಯಕರು ಕೇಳಬೇಕುʼ ಎಂದು ಹೇಳಿದರು.

"ಹೈಕಮಾಂಡ್ ಹೇಳಿದ ನಂತರ ಕೋಲಾರ ಚುನಾವಣಾ ಪ್ರಚಾರಕ್ಕೆ ಹೋಗಿದ್ದೆ. ಸೋಲಿಗೆ ಯಾರು ಕಾರಣ ಎನ್ನುವುದು ಜನಜನಿತವಾಗಿದೆ. ಇದನ್ನು ಹೈಕಮಾಂಡ್, ರಾಜ್ಯ ನಾಯಕರು ಕೇಳಬೇಕು.‌ ನನ್ನ ಕಡೆಯಿಂದ ಯಾವುದೇ ಕಾರಣಕ್ಕೂ ಒಳ ಏಟು ಬಿದ್ದಿಲ್ಲ" ಎಂದು ಸ್ಪಷ್ಟನೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News