ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟಿ ಪವಿತ್ರಾ ಗೌಡ ಪೊಲೀಸ್ ವಶಕ್ಕೆ

Update: 2024-06-11 06:59 GMT

ಬೆಂಗಳೂರು, ಜೂ.11: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು, ನಟ ದರ್ಶನ್ ಸೇರಿದಂತೆ 10 ಜನರನ್ನು ಬಂಧಿಸಿರುವ ಬೆನ್ನಲ್ಲೇ ನಟಿ ಪವಿತ್ರಾ ಗೌಡರನ್ನು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ.

ನಟ ದರ್ಶನ್ ರಿಗೆ ಆತ್ಮೀಯರಾಗಿರುವ ಪವಿತ್ರಾ ಗೌಡರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಮಾಡಿದ್ದನೆನ್ನಲಾದ ಕಾರಣಕ್ಕೆ ರೇಣುಕಾ ಸ್ವಾಮಿಯನ್ನು ಕೊಲೆಗೈಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

I ಹಿನ್ನೆಲೆಯಲ್ಲಿ ಪವಿತ್ರಾ ಗೌಡರನ್ನು ಆರ್.ಆರ್.ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News