ನಾಳೆ(ಮೇ.28) ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Update: 2024-05-27 16:21 GMT

ಬೆಂಗಳೂರು : ರಾಜಧಾನಿ ಬೆಂಗಳೂರಿನ್ನೂ ನಿರ್ಲಕ್ಷ್ಯ ಮಾಡುತ್ತಿರುವ ರಾಜ್ಯ ಸರಕಾರದ ಧೋರಣೆಯನ್ನು ಖಂಡಿಸಿ ನಾಳೆ(ಮಂಗಳವಾರ) ಬೆಳಗ್ಗೆ 11 ಗಂಟೆಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಫ್ರೀಡಂ ಪಾರ್ಕ್‍ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್.ಹರೀಶ್ ತಿಳಿಸಿದರು.

ಸೋಮವಾರ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ನೀರು ಎಲ್ಲ ಮನೆಗಳಿಗೆ ನುಗ್ಗಿ ಅಪಾರ ಹಾನಿ ಆಗಿದೆ. ನಗರದ ಹೊಂಡ-ಗುಂಡಿಗಳನ್ನು ಮುಚ್ಚಲೂ ಇವರ ಬಳಿ ದುಡ್ಡಿಲ್ಲ. ಅನುದಾನವನ್ನೇ ಕೊಡದ ಬ್ರ್ಯಾಂಡ್ ಬೆಂಗಳೂರು ನಮಗೆ ಬೇಡ ಎಂದು ಹೇಳಿದರು.

ಈ ಸರಕಾರ ಬಂದ ಬಳಿಕ ರಸ್ತೆ ಕಾಮಗಾರಿಗಳು ನಡೆದಿಲ್ಲ. ಹೊಸ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯ ನಡೆದಿಲ್ಲ. ಅಭಿವೃದ್ಧಿ ಕಾಮಗಾರಿಗಳನ್ನೇ ಮಾಡದ ಈ ಸರಕಾರದ ವಿರುದ್ಧ ಒಂದು ದೊಡ್ಡ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ. ಈ ಹೋರಾಟದಲ್ಲಿ ಬೆಂಗಳೂರಿನ ಎಲ್ಲ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News