ಬೆಂಗಳೂರಿನ ತಿರುವಳ್ಳವರ್, ಚೆನ್ನೈನ ಸರ್ವಜ್ಞನ ಪ್ರತಿಮೆಗಳು ಸಹೋದರತ್ವದ ಸಂಕೇತ: ಬಿ.ವೈ.ವಿಜಯೇಂದ್ರ

Update: 2024-01-16 15:10 GMT

ಬೆಂಗಳೂರು: ಬೆಂಗಳೂರಿನ ತಿರುವಳ್ಳವರ್ ಪ್ರತಿಮೆ ಮತ್ತು ಚೆನ್ನೈಯ ಸರ್ವಜ್ಞನ ಪ್ರತಿಮೆಗಳು ಕನ್ನಡಿಗರು ಮತ್ತು ತಮಿಳರ ನಡುವಿನ ಸಹೋದರತ್ವದ ಸಂಕೇತದಂತಿವೆ. ಇದನ್ನು ಯಡಿಯೂರಪ್ಪ ಸಾಧ್ಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ.

ಮಂಗಳವಾರ ಇಲ್ಲಿನ ಹಲಸೂರು ಬಳಿ ಇರುವ ವಿಶ್ವಕವಿ ತಿರುವಳ್ಳುವರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ತಿರುವಳ್ಳವರ್ ಪ್ರತಿಮೆ ಅನಾವರಣ ಮತ್ತು ಚೆನ್ನೈಯಲ್ಲಿ ಸರ್ವಜ್ಞ ಅವರ ಪ್ರತಿಮೆ ಅನಾವರಣಗೊಳ್ಳಬೇಕೆಂದು ಹಲವು ದಶಕಗಳಿಂದ ನಿರಂತರ ಹೋರಾಟ ನಡೆಯುತ್ತಿತ್ತು. 2009ರಲ್ಲಿ ಆಗಿನ ಸಿಎಂ ಯಡಿಯೂರಪ್ಪನವರು ಕರ್ನಾಟಕ ಮತ್ತು ತಮಿಳುನಾಡಿನ ಸಹೋದರ ಭಾವ ವೃದ್ಧಿಗಾಗಿ ಇದನ್ನು ಅನುಷ್ಠಾನಕ್ಕೆ ತಂದರು ಎಂದು ಸ್ಮರಿಸಿದರು.

ಬೆಂಗಳೂರಿನಲ್ಲಿ ತಿರುವಳ್ಳವರ್ ಪ್ರತಿಮೆ 18 ವರ್ಷ ಮುಚ್ಚಿಟ್ಟಿದ್ದರು. ಅದರ ಅನಾವರಣ ಆಗಿರಲಿಲ್ಲ. ಯಡಿಯೂರಪ್ಪರ ಪ್ರಯತ್ನದ ಫಲವಾಗಿ ಇಲ್ಲಿ ತಿರುವಳ್ಳವರ್ ಪ್ರತಿಮೆ ಲೋಕಾರ್ಪಣೆ ಆಯಿತು. ಇನ್ನೊಂದೆಡೆ ಚೆನ್ನೈನಲ್ಲಿ ಸರ್ವಜ್ಞನ ಪ್ರತಿಮೆಯೂ ಅನಾವರಣಗೊಂಡಿತು ಎಂದು ವಿವರಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News