ಬಿಎಂಟಿಸಿ ಬಸ್ ಹರಿದು ದ್ವಿಚಕ್ರ ವಾಹನ ಸವಾರ ಮೃತ್ಯು

Update: 2024-01-08 15:21 GMT

ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಬಸ್ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಕೆಂಗೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ವರದಿಯಾಗಿದೆ.

ವಾಹನ ಹಿಂದಿಕ್ಕುವ ವೇಳೆ ಬಿಎಂಟಿಸಿ ಬಸ್ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ನೆಲಕ್ಕೆ ಬಿದ್ದಾಗ ಬಸ್‍ನ ಹಿಂಬದಿ ಚಕ್ರ ಹರಿದ ಪರಿಣಾಮ ತೇಜಸ್(22) ಎಂಬಾತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಮೃತ ತೇಜಸ್ ಮಧ್ಯಾಹ್ನ ಸೋಮವಾರ 12:25ರ ಸುಮಾರಿಗೆ ಉತ್ತರಹಳ್ಳಿ ರಸ್ತೆಯಲ್ಲಿ ತನ್ನ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ. ಮಂತ್ರಿ ಆಲ್ಫೈನ್ ಅಪಾರ್ಟ್‌ ಮೆಂಟ್ ಬಳಿ ಸಾಗುತ್ತಿದ್ದ ವೇಳೆ ಮೈಸೂರು ರಸ್ತೆ ಉತ್ತರಹಳ್ಳಿ ಮಾರ್ಗದ ಬಸ್ ಅನ್ನು ಓವರ್ ಟೇಕ್ ಮಾಡಲು ಯತ್ನಿಸಿದಾಗ ಟಚ್ ಆಗಿ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಬಸ್‍ನ ಬಲ ಹಿಂಭಾಗದ ಚಕ್ರ ತೇಜಸ್ ಮೇಲೆ ಹರಿದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಕೆಂಗೇರಿ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿರುವುದಾಗಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News