ಭಾಷೆಯ ಹೆಸರಿನಲ್ಲಿ ಪುಂಡತನ ಮೆರೆಯುತ್ತಿರುವುದು ಖಂಡನೀಯ: ವಿಜಯೇಂದ್ರ

Update: 2025-02-22 19:31 IST
ಭಾಷೆಯ ಹೆಸರಿನಲ್ಲಿ ಪುಂಡತನ ಮೆರೆಯುತ್ತಿರುವುದು ಖಂಡನೀಯ: ವಿಜಯೇಂದ್ರ
  • whatsapp icon

ಬೆಂಗಳೂರು: ಬೆಳಗಾವಿ ಗಡಿ ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಭಾಷಾ ಸೌಹಾರ್ದತೆ ವೃದ್ಧಿಸುತ್ತಿದೆ, ನಾಡ ಪ್ರೇಮ ಪಸರಿಸುತ್ತಿದೆ, ಗಡಿ ಸೌಹಾರ್ದತೆಯೂ ಇಮ್ಮಡಿಸುತ್ತಿದೆ. ಈ ನಡುವೆ ಸಮಾಜಘಾತುಕ ಕಿಡಿಗೇಡಿಗಳು ಭಾಷೆಯ ಹೆಸರಿನಲ್ಲಿ ಪುಂಡತನ ಮೆರೆಯುತ್ತಿರುವುದು ಅತ್ಯಂತ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಈ ಸಂಬಂಧ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ಮರಾಠಿ ಭಾಷೆಯ ಹೆಸರಿನಲ್ಲಿ ಕೆಎಸ್ಸಾರ್ಟಿಸಿ ನಿರ್ವಾಹಕರ ಮೇಲೆ ಹಲ್ಲೆ ನಡೆದಿರುವ ಘಟನೆ ಭಾಷಾ ದೌರ್ಜನ್ಯದ ಪರಮಾವಧಿಯಾಗಿದೆ. ನಾಗರಿಕ ಸಮಾಜ ತಲೆತಗ್ಗಿಸುವ ಈ ದುರ್ವರ್ತನೆಯನ್ನು ಸಹಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ದುಷ್ಕರ್ಮಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿ. ಮರಾಠಿ-ಕನ್ನಡದ ಸೌಹಾರ್ದತೆಗೆ ಧಕ್ಕೆ ತರುತ್ತಿರುವ ಕನ್ನಡ ವಿರೋಧಿ ಮನಸ್ಥಿತಿಯ ದುರಾಕ್ರಮಣಗಳು ಪುನರಾವರ್ತನೆಯಾಗದ ರೀತಿಯಲ್ಲಿ ಸರಕಾರ ಮುನ್ನೆಚ್ಚರಿಕೆ ಕ್ರಮವಹಿಸಲಿ ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News