ಹಲ್ಲೆ ಪ್ರಕರಣ: ಬೆಳಗಾವಿ ಮನಪಾ ಬಿಜೆಪಿ ಸದಸ್ಯನೋರ್ವನ ಬಂಧನ

Update: 2023-11-27 04:13 GMT

ಬೆಳಗಾವಿ, ನ.27: ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯ ಅಭಿಜಿತ್ ಜವಳ್ಕರ್ ಎಂಬವರನ್ನು ಟಿಳಕವಾಡಿ ಠಾಣೆ ಪೊಲೀಸರು ರವಿವಾರ ತಡರಾತ್ರಿ ಬಂಧಿಸಿದ್ದಾರೆ.

ಬೆಳಗಾವಿಯ ಭಾಗ್ಯ ನಗರದ 9ನೇ ಕ್ರಾಸ್ ಮನೆಯಲ್ಲಿ ಮೊಬೈಲ್ ಟವರ್ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿ ನ.23ರಂದು ಅಭಿಜಿತ್ ಜವಳ್ಕರ್ ಮತ್ತು ರಮೇಶ್ ಪಾಟೀಲ್ ಎಂಬವರ ಮಧ್ಯೆ ಜಟಾಪಟಿ ನಡೆದಿತ್ತು. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ರಮೇಶ್ ಪಾಟೀಲ್ ಅವರನ್ನು ಪೊಲೀಸರು ಅಂದೇ ಬಂಧಿಸಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿ ಅಭಿಜಿತ್ ಜವಳ್ಕರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News