ಬೆಳಗಾವಿ ಯೋಧನ ನಿಧನ: ಕುಟುಂಬಸ್ಥರನ್ನು ಭೇಟಿ ಮಾಡಿ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Update: 2024-01-09 06:33 GMT

ಬೆಳಗಾವಿ: ಅನಾರೋಗ್ಯದಿಂದ ಮೃತರಾದ ಗೋಕಾಕ್ ತಾಲೂಕಿನ ಡುಮ್ಮಉರಬಿನಹಟ್ಟಿಯ ವೀರಯೋಧ ಮಹಾಂತೇಶ ಬಸಪ್ಪಾ ಹುಬ್ಬಳ್ಳಿ (31) ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಂಬನಿ ಮಿಡಿದಿದ್ದಾರೆ.

ಮಹಾಂತೇಶ ಅವರು ಅನಾರೋಗ್ಯದಿಂದ ದೆಹಲಿಯ ಆಸ್ಪತ್ರೆಯಲ್ಲಿ 2 ದಿನಗಳ ಹಿಂದೆ ನಿಧನರಾಗಿದ್ದಾರೆ.

ಇಂದು ಯೋಧನ ಪಾರ್ಥಿವ ಶರೀರ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿಗೆ ಆಗಮಿಸಿದ್ದ ಕುಟುಂಬಸ್ಥರನ್ನು ಭೇಟಿ ಮಾಡಿ ಧೈರ್ಯ ತುಂಬಿದ ಸಚಿವರು, ಯೋಧನ ಆತ್ಮಕ್ಕೆ ಶಾಂತಿ ಕೋರಿದರು.

ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ (MEG) ನ ಪಂಜಾಬ್ ಯುನಿಟ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯೋಧ ಮಹಾಂತೇಶ ಚಿಕ್ಕ ವಯಸ್ಸಿನಲ್ಲಿಯೇ ಮೃತರಾಗಿರುವುದು ದುರ್ದೈವದ ಸಂಗತಿ, ಅವರ ನಿಧನದ ಸುದ್ದಿ ಅತೀವ ನೋವುಂಟು ಮಾಡಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News