ಸಿಎಂ ಸ್ಥಾನದ ವಿಚಾರ ಗಲ್ಲಿಯಲ್ಲಿ, ಬೀದಿಯಲ್ಲಿ ಮಾತನಾಡುವ ವಿಷಯವಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Update: 2024-09-11 12:29 GMT

ಬೆಳಗಾವಿ : "ಮುಖ್ಯಮಂತ್ರಿ ಸ್ಥಾನದ ವಿಚಾರ ಗಲ್ಲಿ, ಬೀದಿಗಳಲ್ಲಿ ಮಾತನಾಡುವಂತದ್ದಲ್ಲ"  ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಬುಧವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಮ್ಮ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಗಟ್ಟಿಯಾಗಿದ್ದಾರೆ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ಎನ್ನುವುದು ಇದೆ. ಶಿಸ್ತು ಎನ್ನುವುದೂ ಇದೆ. ನಾನು ಕೂಡ ಪಕ್ಷದ ಶಿಸ್ತಿನ ಸಿಪಾಯಿ, ಇಂಥಹ ವಿಚಾರಗಳನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ನಮ್ಮ ಪಕ್ಷದ 135 ಶಾಸಕರು ತೀರ್ಮಾನಿಸುತ್ತಾರೆ" ಎಂದು ಹೇಳಿದರು

"ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುವವರೆಗೆ, ಆಯ್ಕೆಯಾದ ಶಾಸಕರು ತೀರ್ಮಾನ ತೆಗೆದುಕೊಳ್ಳುವವರೆಗೆ ಸಿಎಂ ಸ್ಥಾನದ ಬದಲಾವಣೆಯೇ ಪ್ರಶ್ನೆ ಬರುವುದಿಲ್ಲ. ಇಂಥಹ ವಿಚಾರಗಳನ್ನ ಬೀದಿಯಲ್ಲಿ, ಗಲ್ಲಿಯಲ್ಲಿ ಮಾತನಾಡುವುದು ಸರಿಯಲ್ಲ" ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News