ಗೋಕಾಕ್ | ಪ್ರವಾಹ‌ ಪೀಡಿತ ಸ್ಥಳಗಳಿಗೆ ಸಿಎಂ ಭೇಟಿ : ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದ ಸಿದ್ದರಾಮಯ್ಯ

Update: 2024-08-05 11:39 GMT

ಬೆಳಗಾವಿ : ಅತೀವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕ್ ನಗರದ ವಿವಿಧ ಪ್ರದೇಶಗಳು ಮತ್ತು ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

ಅತೀವೃಷ್ಟಿಯಿಂದ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರು, ಹೊಸ ಸೇತುವೆ ನಿರ್ಮಾಣಕ್ಕೆ ಮನವಿ ಮಾಡಿದರು. ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ, ವಿಧಾನಪರಿಷತ್ ಸದಸ್ಯರಾದ ಲಖನ್ ಜಾರಕಿಹೊಳಿ ಮತ್ತಿತರರು ಉಪಸ್ಥಿತರಿದ್ದರು.

ಬಳಿಕ ಲೋಳಸೂರ ಸೇತುವೆಯ ಬಳಿ ಹಿನ್ನೀರಿನಿಂದ ಒಂದು ವಾರದಿಂದ ಮುಳುಗಡೆಯಾಗಿದ್ದ ಗೋಕಾಕ್ ನಗರದ ಹಳೆ ದನಗಳ ಪೇಟೆ, ಮಟನ್ ಮಾರ್ಕೆಟ್, ಕುಂಬಾರಗಲ್ಲಿ, ಉಪ್ಪಾರಗಲ್ಲಿ, ಭೋಜಗಾರ ಗಲ್ಲಿ ಮತ್ತಿತರ‌ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದರು.

ಕಾಳಜಿ ಕೇಂದ್ರಕ್ಕೆ‌ ಭೇಟಿ : ಮುಳಗಡೆಯಿಂದ ಸಂತ್ರಸ್ತರಾಗಿರುವ ಕುಟುಂಬಗಳಿಗೆ ವಸತಿ ಕಲ್ಪಿಸಲು ಗೋಕಾಕ್ ನಗರದ ಸರಕಾರಿ ಮುನ್ಸಿಪಲ್‌ ಕಾಲೇಜಿನಲ್ಲಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಕ್ಕೆ‌ ಮುಖ್ಯಮಂತ್ರಿ‌ ಸಿದ್ದರಾಮಯ್ಯನವರು ಭೇಟಿ ನೀಡಿ, ಸಂತ್ರಸ್ತರ‌ ಜತೆ‌ ಚರ್ಚಿಸಿದರು.

ಮನೆಗಳಿಗೆ ನೀರು ನುಗ್ಗಿದ ತಕ್ಷಣವೇ ಅಧಿಕಾರಿಗಳು ಕಾಳಜಿ ಕೇಂದ್ರಕಕ್ಕೆ ನಮ್ಮನ್ನು ಸ್ಥಳಾಂತರಿಸಿ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಿರುತ್ತಾರೆ ಎಂದು ಸಂತ್ರಸ್ತ ಕುಟುಂಬವರು ಹೇಳಿದರು.

ಸಂತ್ರಸ್ತರಿಗೆ ಊಟೋಪಹಾರ ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.

‌ಈ ಸಂದರ್ಭದಲ್ಲಿ  ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News