ಬೀದರ್ | ಸಾಲಬಾಧೆಗೆ ಬ್ರಿಮ್ಸ್ ವೈದ್ಯ ಆತ್ಮಹತ್ಯೆ

Update: 2024-09-11 13:41 GMT

ಮುಹಮ್ಮದ್ ಸೋಹೆಲ್

ಬೀದರ್ : ಸಾಲಬಾಧೆಗೆ ಬೇಸತ್ತು ಬೀದರ್ ತಾಲೂಕಿನ ಚಿಟ್ಟಾ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಬ್ರಿಮ್ಸ್ ಆಸ್ಪತ್ರೆಯ ವೈದ್ಯ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವೈದ್ಯನನ್ನು ಮುಹಮ್ಮದ್ ಸೋಹೆಲ್ ಎಂದು ಗುರುತಿಸಲಾಗಿದೆ. ಮುಹಮ್ಮದ್ ಸೋಹೆಲ್ ಎಂಬಿಬಿಎಸ್ ಅಧ್ಯಯನಕ್ಕಾಗಿ ವಿವಿಧ ಫೈನಾನ್ಸ್‌ನಲ್ಲಿ ಲಕ್ಷಾಂತರ ರೂ. ಸಾಲ ಮಾಡಿದ್ದರು ಎನ್ನಲಾಗಿದೆ. ಆದರೆ, ಸಾಲ ತೀರಿಸಲಾಗದೆ ವೈದ್ಯ ಮುಹಮ್ಮದ್ ಸೋಹೆಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಅರಣ್ಯ ಪ್ರದೇಶದಲ್ಲಿ ಕೊಳೆತ‌ ಸ್ಥಿತಿಯಲ್ಲಿ ವೈದ್ಯನ ಮೃತದೇಹ ಪತ್ತೆಯಾಗಿತ್ತು. ಪೊಲೀಸರು ತನಿಖೆ ನಡೆಸಿದಾಗ ವಿಚಾರ ಬೆಳಕಿಗೆ ಬಂದಿದೆ. ಗಾಂಧಿಗಂಜ್ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News