ಲೋಕಸಭೆಯಲ್ಲಿ ವಯನಾಡ್ ಭೂಕುಸಿತವನ್ನು ಪ್ರಸ್ತಾಪಿಸಿದ ರಾಹುಲ್ ಗಾಂಧಿ

ಹೊಸದಿಲ್ಲಿ: ವಯನಾಡ್ ನಲ್ಲಿ ಸಂಭವಿಸಿರುವ ಭೀಕರ ಭೂಕುಸಿತದ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ.

ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊವೊಂದನ್ನು ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್, “ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ವಯನಾಡ್ ನಲ್ಲಿ ಸಂಭವಿಸಿರುವ ಭಯಾನಕ ಭೂ ಕುಸಿತದ ಕುರಿತು ಲೋಕಸಭೆಯಲ್ಲಿ ಪ್ರಸ್ತಾಪಿಸಿದರು. ವಯನಾಡ್ ನಿಂದ ಬರುತ್ತಿರುವ ಸುದ್ದಿಗಳು ಹೃದಯವಿದ್ರಾವಕವಾಗಿದ್ದು, ಭೂಕುಸಿತಗಳು ಮುಂದುವರಿದಿವೆ ಎಂಬುದರತ್ತ ಬೊಟ್ಟು ಮಾಡುತ್ತಿವೆ” ಎಂದು ಬರೆದುಕೊಂಡಿದ್ದಾರೆ.

“ಈ ಅತ್ಯಗತ್ಯದ ಸಂದರ್ಭದಲ್ಲಿ ವಯನಾಡ್ ಜನತೆಗೆ ನೆರವನ್ನು ಒದಗಿಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಾವು ಕೇಂದ್ರ ಮತ್ತು ರಾಜ್ಯ ಸರಕಾರಗಳೆರಡನ್ನೂ ಆಗ್ರಹಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

Update: 2024-07-30 08:09 GMT

Linked news