ಕರ್ನಾಟಕ ಬಜೆಟ್ 2023 | ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಇಂದು (ಶುಕ್ರವಾರ) ಮಧ್ಯಾಹ್ನ 12 ಗಂಟೆಗೆ 14ನೇ ಬಜೆಟ್‌ ಅನ್ನು ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಸಭೆ ನಡೆಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಲ್​ಪಿ ಸಭೆ ಆರಂಭವಾಗಿದ್ದು, ಬಜೆಟ್​ ಹಾಗೂ ಸದನದಲ್ಲಿ ಹೇಗೆಲ್ಲ ಮಾತನಾಡಬೇಕು ಎನ್ನುವುದರ ಬಗ್ಗೆ ಶಾಸಕರು, ಸಚಿವರಿಗೆ ಸಿಎಂ ಸಲಹೆ ನೀಡುತ್ತಿದ್ದಾರೆ.

ಇನ್ನು ಸಿಎಂ ಸಿದ್ದರಾಯ್ಯ ಮಹತ್ವದ ಐದು ಗ್ಯಾರಂಟಿಗಳಿಗೆ ಯಾವ ರೀತಿ ಹಣ ಹೊಂದಾಣಿಕೆ ಮಾಡಲಿದ್ದಾರೆ ಎಂಬ ಕುತೂಹಲ ಸೃಷ್ಟಿಸಿದೆ.

Update: 2023-07-07 05:03 GMT

Linked news