ಚಾಮರಾಜನಗರ | ಶಾಲಾ ವಾಹನ ಹರಿದು ಒಂದೂವರೆ ವರ್ಷದ ಮಗು ಮೃತ್ಯು

Update: 2024-09-19 10:28 GMT

ಚಾಮರಾಜನಗರ : ಶಾಲಾ ವಾಹನವೊಂದು ಹರಿದು ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಕಮರವಾಡಿ ಗ್ರಾಮದಲ್ಲಿ ನಡೆದಿದೆ.

ಕಮರವಾಡಿ ಗ್ರಾಮದ ನವೀನ್ ಮತ್ತು ಚೈತ್ರ ದಂಪತಿಯ ಪುತ್ರ ಆರ್ಯ ಮೃತ ಮಗು. ಸಂತೇಮರಹಳ್ಳಿಯಲ್ಲಿರುವ ಖಾಸಗಿ ಶಾಲೆಗೆ ಸೇರಿದ ವಾಹನವು ಮಕ್ಕಳನ್ನು ಕರೆ ತರಲು ಕಮರವಾಡಿ ಗ್ರಾಮಕ್ಕೆ ಬಂದಿದ್ದು, ಈ ವೇಳೆ ಮಕ್ಕಳನ್ನು ಹತ್ತಿಸಿಕೊಂಡ ಚಾಲಕ ವಾಹನವನ್ನು ಹಿಂದಕ್ಕೆ ತೆಗೆಯಲು ಹೋದ ಸಂದರ್ಭದಲ್ಲಿ ಮನೆಯ ಮುಂದೆ ನಿಂತಿದ್ದ ಆರ್ಯ ಎಂಬ ಮಗುವಿನ ಮೇಲೆ ಹರಿದಿದೆ. ಇದರಿಂದ ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಸಂತೇಮಹರಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಮಗುವಿನ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಚಾಮರಾಜನಗರದ ಸಿಮ್ ಬೋಧನಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News