ಚಾಮರಾಜನಗರ | ಕಾಲು ಜಾರಿ ನಾಲೆಗೆ ಬಿದ್ದು ವಿದ್ಯಾರ್ಥಿ ಮೃತ್ಯು

Update: 2024-09-19 10:43 GMT

ವೈ.ಎನ್.ರೋಹಿತ್ (14)

ಚಾಮರಾಜನಗರ : ಕಬಿನಿ ನಾಲೆಯಲ್ಲಿ ಕಾಲು ಜಾರಿ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಬಸವಟ್ಟಿ ಗ್ರಾಮದಲ್ಲಿ ನಡೆದಿದೆ.

ಬಸವಟ್ಟಿ ಗ್ರಾಮದ ಮಹದೇವಮ್ಮ ಎಂಬುವವರ ಪುತ್ರ ವೈ.ಎನ್.ರೋಹಿತ್ (14) ಮೃತ ವಿದ್ಯಾರ್ಥಿ. ಈತ ಸಂತೇಮರಹಳ್ಳಿಯ ಸರಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಬುಧವಾರ ಸಂಜೆ ಕಬಿನಿ 42ರ ಉಪ ನಾಲೆ ಕಡೆ ತೆರಳಿದ್ದಾನೆ. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನಾಲೆಗೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News