ಚಾಮರಾಜನಗರ: ಸಿಡಿದ ಕೆಎಸ್ಸಾರ್ಟಿಸಿ ಬಸ್ಸಿನ ಟಯರ್;‌ ಅಪಾಯದಿಂದ ಪಾರಾದ ಪ್ರಯಾಣಿಕರು

Update: 2024-08-28 07:41 GMT

ಚಾಮರಾಜನಗರ : ಕೆಎಸ್ಸಾರ್ಟಿಸಿ ಬಸ್ಸಿನ ಟಯರ್ ಟೈರ್ ಸಿಡಿದು 20ಕ್ಕೂ  ಹೆಚ್ಚು ಪ್ರಯಾಣಿಕರು  ಚಾಲಕನ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರದ ಘಟನೆ   ಹನೂರು ತಾಲ್ಲೂಕಿನ ಅಜ್ಜೀಪುರ ಬಳಿ ಮಂಗಳವಾರ ತಡರಾತ್ರಿ ನಡೆದಿರುವ ಬಗ್ಗೆ ಬುಧವಾರ ವರದಿಯಾಗಿದೆ.

ಕೊಳ್ಳೇಗಾಲ ದಿಂದ ದಂಟಲ್ಲಿ ಗ್ರಾಮದ ಕಡೆಗೆ ಹೋಗುವ ಬಸ್ ರಾಮಪುರ ಕೌದಳ್ಳಿ ಮಾರ್ಗವಾಗಿ ಸಂಚರಿಸುವ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಕೆಎಸ್ಸಾರ್ಟಿಸಿ ಬಸ್ಸಿನ ಟಯರುಗಳು ತೀವ್ರ ಕಳಪೆ ಮಟ್ಟದ್ದಾಗಿದ್ದು, ವಾಹನಗಳು ತಳ್ಳುಗಾಡಿಗಳಂತೆ ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತವೆ. ಈ ರೀತಿ ವಾಹನಗಳು ಕೆಟ್ಟ ನಿಲ್ಲುವ ಮೂಲಕ ಪ್ರಯಾಣಿಕರಿಗೆ ತೊಂದರೆ ಉಂಟಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. 

ಸಂಬಂಧಪಟ್ಟ ಕರ್ನಾಟಕ ರಾಜ್ಯ ಸಾರಿಗೆ ಹಿರಿಯ ಅಧಿಕಾರಿಗಳು ಸಾರಿಗೆ ವಾಹನಗಳನ್ನು ಬದಲಾವಣೆ ಮಾಡಿ ಉತ್ತಮ ಸಾರಿಗೆ ವ್ಯವಸ್ಥೆಯನ್ನು ಕಲ್ಪಸಿ ಈ ಭಾಗದ ಪ್ರಯಾಣಿಕರಿಗೆ ಸಂಚರಿಸಲು ಅನುಕೂಲ ಮಾಡಿಕೊಡುವಂತೆ ಪ್ರಯಾಣಿಕರು ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News