ಹನೂರು : ಕೆಟ್ಟು ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಢಿಕ್ಕಿ: ಚಾಲಕನಿಗೆ ಗಾಯ

Update: 2024-03-16 05:00 GMT

ಚಾಮರಾಜನಗರ, ಮಾ.16: ರಸ್ತೆ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಢಿಕ್ಕಿ ಹೊಡೆದ ಘಟನೆ ಹನೂರು ತಾಲೂಕಿನ ಗಡಿ ಭಾಗವಾದ ಗರಿಕೆಕಿಂಡಿ ಸಮೀಪ ಇಂದು ಮುಂಜಾನೆ ನಡೆದಿದೆ.

ಚಾಮರಾಜನಗರದಿಂದ ತಮಿಳುನಾಡಿಗೆ ತೆರುಳುತ್ತಿದ್ದ ಲಾರಿಯೊಂದು ಕೆಟ್ಟು ರಸ್ತೆಯ ಪಕ್ಕದಲ್ಲಿ ನಿಂತಿತ್ತು. ಈ ವೇಳೆ ತಮಿಳುನಾಡಿನಿಂದ ಕರ್ನಾಟಕಕ್ಕೆ ಬರುತ್ತಿದ್ದಂತಹ ಲಾರಿಯೊಂದು ಢಿಕ್ಕಿ ಹೊಡೆದು ರಸ್ತೆಯ ಪಕ್ಕದ ಗೋಡೆಗೂ ಸಹ ಗುದ್ದಿದೆ. ಇದರ ಪರಿಣಾಮ ಲಾರಿಗಳೆರಡು ಜಖಂಗೊಂಡು ಚಾಲಕನಿಗೆ ಗಾಯಗಳಾಗಿವೆ.

ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಅವಘಡ ಶನಿವಾರ ಮುಂಜಾನೆ 5 ಗಂಟೆಯಲ್ಲಿ ಸಂಭವಿಸಿದೆ ಹಾಗೂ ಕೆಲ ಕಾಲ ರಸ್ತೆ ಅಡಚಣೆ ಉಂಟಾಗಿತ್ತು ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News