ಶಾಸಕ ಮುನಿರತ್ನ ಅನರ್ಹ ಹಾಗೂ ಗಡಿಪಾರಿಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

Update: 2024-09-17 11:55 GMT

ಚಾಮರಾಜನಗರ : ಗುತ್ತಿಗೆದಾರರೊಂದಿಗೆ ಹಣಕಾಸಿನ ವ್ಯವಹಾರದಲ್ಲಿ ಜಾತಿ ನಿಂದನೆ ಹಾಗೂ ಅಶ್ಲೀಲ ಪದ ಬಳಕೆ ಮಾಡಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ, ರಾಜ್ಯದಿಂದ ಗಡಿಪಾರು ಮಾಡುವಂತೆ ಆಗ್ರಹಿಸಿ ಚಾಮರಾಜನಗರದಲ್ಲಿ ಕಾಂಗ್ರೆಸ್ ಎಸ್‌ಸಿ ವಿಭಾಗದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು ಶಾಸಕ ಮುನಿರತ್ನ ವಿರುದ್ದ ಘೋಷಣೆ ಕೂಗಿ ಪ್ರತಿಭಟಿಸಿದರು.

ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಗೆ ಬಂದ ಪ್ರತಿಭಟನಾಕಾರರು, ಶಾಸಕ ಮುನಿರತ್ನ ಅವರ ಮೇಲೆ ಪ್ರಕರಣ ದಾಖಲು ಮಾಡುವಂತೆ ಮನವಿ ಸಲ್ಲಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News