ಹನೂರು | ಹಾಡಹಗಲೇ ಬೈಕ್ ಕಳವಿಗೆ ಯತ್ನ: ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

Update: 2024-07-11 05:35 GMT

ಚಾಮರಾಜನಗರ, ಜು.11: ಹಾಡಹಗಲೇ ಬೈಕ್ ಕಳವಿಗೆ ಯತ್ನಿಸಿದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಹನೂರು ತಾಲೂಕಿನ ಕೆ. ಗುಂಡಾಪುರ ಗ್ರಾಮದ ಬಳಿ ಗುರುವಾರ ನಡೆದಿದೆ.

ಕೆ. ಗುಂಡಾಪುರ ಗ್ರಾಮದ ಬಳಿ ವ್ಯಕ್ತಿಯೊಬ್ಬ ನಕಲಿ ಕೀ ಬಳಸಿ ಬೈಕ್ ಕಳುವು ಮಾಡಲು ಯತ್ನಿಸುತ್ತಿದ್ದನೆನ್ನಲಾಗಿದೆ. ಈ ವೇಳೆ ಬೈಕ್ ಮಾಲಕ ಆರೋಪಿಯನ್ನು ನೆರೆಹೊರೆಯರ ಸಹಾಯದೊಂದಿಗೆ ಹಿಡಿದು ಕಂಬಕ್ಕೆ ಕಟ್ಟಿಹಾಕಿದ್ದಾರೆ.

ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕೆ ಆಗಮಿಸಿ ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News