ವಯನಾಡು ದುರಂತ: ಚಾಮರಾಜನಗರದ ಇಬ್ಬರು ಮೃತ್ಯು; ಇನ್ನಿಬ್ಬರು ಕಣ್ಮರೆ

Update: 2024-07-31 07:03 GMT

ಚಾಮರಾಜನಗರ, ಜು.31: ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೀಕರ ಭೂ ಕುಸಿತದಲ್ಲಿ ಸಿಲುಕಿ ಚಾಮರಾಜನಗರ ಜಿಲ್ಲೆಯ ಇಬ್ಬರು ಮೃತಪಟ್ಟಿದ್ದರೆ, ಇನ್ನಿಬ್ಬರು ಕಣ್ಮರೆಯಾಗಿರುವುದಾಗಿ ವರದಿಯಾಗಿದೆ. ಗಾಯಗೊಂಡಿರುವ ಓರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ ಪುಟ್ಟಸಿದ್ದಿ(62) ಮತ್ತು ರಾಣಿ(50) ಮೃತಪಟ್ಟವರು.ಅವರ ಮೃತದೇಹಗಳು ಪತ್ತೆಯಾಗಿವೆ.

ಚಾಮರಾಜನಗರ ತಾಲೂಕಿನ ಇರಸವಾಡಿ ಗ್ರಾಮದ ನಿವಾಸಿಗಳಾದ ರಾಜೇಂದ್ರ(50) ಮತ್ತು ರತ್ನಮ್ಮ(45) ಎಂಬವರು ಕಣ್ಮರೆ ಆಗಿದ್ದಾರೆ ಎಂದು ತಿಳಿದುಬಂದಿದೆ.

ಗುಂಡ್ಲುಪೇಟೆ ತಾಲೂಕಿನ ತ್ರಿಯಂಬಕಪುರ ಗ್ರಾಮದ ಸ್ವಾಮಿಶೆಟ್ಟಿ(70) ಎಂಬವರು ಗಾಯಗೊಂಡಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News