ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ | ಅಗತ್ಯಬಿದ್ದಲ್ಲಿ NIAಗೆ ವಹಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

Update: 2024-03-03 08:50 GMT

ಚಿಕ್ಕಮಗಳೂರು, ಮಾ.3: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಗತ್ಯ ಬಿದ್ದರೇ ಎನ್ ಐಎ ಗೆ ವಹಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರ ಜತೆ ಮಾತನಾಡಿದ ಪ್ರಕರಣಕ್ಕೆ ಸರಕಾರ ಗಂಭೀರವಾಗಿ ಪರಿಗಣಿಸಿದೆ. ಸರಕಾರಕ್ಕೆ ಜನರ ಭದ್ರತೆ ಮುಖ್ಯ ಎಂದರು.

ಬ್ರಾಂಡ್ ಬೆಂಗಳೂರು ಬಾಂಬ್ ಬೆಂಗಳೂರು ಆಗುತ್ತಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಮಾಧ್ಯಮದವರು ಗಮನಸೆಳೆದಾಗ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಬಿಜೆಪಿ ಸರಕಾರದ ಅವಧಿಯಲ್ಲೂ ರಾಜ್ಯದಲ್ಲಿ ಬಾಂಬ್ ಸ್ಫೋಟಗಳು ಸಂಭವಿಸಿವೆ. 2008ರಲ್ಲಿ ನಾಲ್ಕು ಬಾರೀ ಬಾಂಬ್ ಸ್ಫೋಟಗಳಾಗಿವೆ. ಹಾಗಂತ ಸ್ಫೋಟ ಪ್ರಕರಣವನ್ನು ಸಮರ್ಥನೆ ಮಾಡಲಾಗದು. ಆದರೆ ಇಂತಹ ವಿಚಾರಗಳಲ್ಲಿ ಬಿಜೆಪಿ ರಾಜಕೀಯ ಮಾಡಬಾರದು ಎಂದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News