ತರೀಕೆರೆಯಲ್ಲಿ ಬಸ್- ಕಾರು ಮಧ್ಯೆ ಅಪಘಾತ: ಒಂಭತ್ತು ಮಂದಿಗೆ ಗಂಭೀರ ಗಾಯ

Update: 2023-09-12 04:52 GMT

ಚಿಕ್ಕಮಗಳೂರು, ಸೆ.12: ಕೆಎಸ್ಸಾರ್ಟಿಸಿ ಬಸ್ ಮತ್ತು ಕಾರೊಂದರ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಒಂಭತ್ತು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕು ಬೇಲೇನಹಳ್ಳಿ ಸಮೀಪ ಸೋಮವಾರ ತಡರಾತ್ರಿ ಸಂಭವಿಸಿದೆ.

ಶಿವಮೊಗ್ಗ ಕಡೆಯಿಂದ ತರೀಕೆರೆ ಮಾರ್ಗವಾಗಿ ಸಂಚರಿಸುತ್ತಿದ್ದ ಸರಕಾರಿ ಬಸ್ ಮತ್ತು ತರೀಕೆರೆಯಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದ ಕಾರು ಮಧ್ಯೆ ಬೇಲನಹಳ್ಳಿ ಗ್ರಾಮದ ಸಮೀಪ ಈ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಇದರಿಂದ ಕಾರಿನಲ್ಲಿದ್ದ 9 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಭದ್ರಾವತಿ ಮೂಲದವರು ಎಂದು ತಿಳಿದುಬಂದಿದೆ.

ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News