ಚಿಕ್ಕಮಗಳೂರು | ಬೈಕ್-ಕ್ಯಾಂಟರ್ ಢಿಕ್ಕಿ : ಸವಾರ ಮೃತ್ಯು

Update: 2024-05-27 13:43 GMT

ಚಿಕ್ಕಮಗಳೂರು : ಬೈಕ್ ಹಾಗೂ ಕ್ಯಾಂಟರ್ ನಡುವೆ ಢಿಕ್ಕಿಯಾಗಿ ಸವಾರ ಮೃತಪಟ್ಟು, ಹಿಂಬದಿಯಲ್ಲಿದ್ದ ಬೈಕ್ ಸವಾರನ ನಾಲಗೆ ತುಂಡಾಗಿರುವ ಘಟನೆ ಸೋಮವಾರ ನಗರ ಸಮೀಪದ ಮೂಗ್ತಿಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ.

ಅರಸೀಕೆರೆ ತಾಲೂಕಿನ ಬಂದೂರು ಗ್ರಾಮದ ನಿವಾಸಿ ಶಿವರಾಜ್(26) ಅಪಘಾತದಲ್ಲಿ ಮೃತಪಟ್ಟ ಯುವಕನಾಗಿದ್ದು, ಅದೇ ಗ್ರಾಮದ ಯುವತಿ ಲಾವಣ್ಯಾಳ ನಾಲಗೆ ತುಂಡಾಗಿದೆ. ಸೋಮವಾರ ಚಿಕ್ಕಮಗಳೂರು ಕಡೆಯಿಂದ ಮೂಡಿಗೆರೆ ರಸ್ತೆಯಲ್ಲಿ ಬೈಕ್‍ನಲ್ಲಿ ಶಿವರಾಜ್ ಹಾಗೂ ಲಾವಣ್ಯಾ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಕ್ಯಾಂಟರ್ ಲಾರಿ ಬೈಕ್‍ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಶಿವರಾಜ್ ತಲೆಗೆ ತೀವ್ರಪೆಟ್ಟು ಬಿದ್ದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿಯಲ್ಲಿ ಕುಳಿತಿದ್ದ ಲಾವಣ್ಯಾ ಬೈಕ್ ಢಿಕ್ಕಿಯಾದ ರಭಸಕ್ಕೆ ರಸ್ತೆ ಬದಿಗೆ ಹಾರಿ ಬಿದ್ದಿದ್ದು, ಈ ವೇಳೆ ಆಕೆಯ ನಾಲಗೆಯ ಸ್ವಲ್ಪ ಭಾಗ ತುಂಡಾಗಿದೆ ಎಂದು ತಿಳಿದು ಬಂದಿದೆ.

ಲಾವಣ್ಯಾ ಚಿಕ್ಕಮಗಳೂರು ನಗರದಲ್ಲಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಆಕೆಯ ಪರಿಚಯಸ್ಥ ಯುವಕನೊಂದಿಗೆ ಸೋಮವಾರ ನಗರದಿಂದ ಹೊರ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News