ಚಿಕ್ಕಮಗಳೂರು | ತೆಪ್ಪ ಮುಳುಗಿ ಶಿವಮೊಗ್ಗ ಮೂಲದ ಮೂವರು ಮೃತ್ಯು

Update: 2024-06-19 15:26 GMT

ಸಾಜಿದ್, ಅಫ್ದಾಖಾನ್, ಆದಿಲ್

ಚಿಕ್ಕಮಗಳೂರು : ತೆಪ್ಪ ಮುಳುಗಿ ಮೂವರು ಯುವಕರು ಸಾವನ್ನಪ್ಪಿರುವ ಧಾರುಣ ಘಟನೆ ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಭೈರಾಪುರ ಗ್ರಾಮದಲ್ಲಿ ಬುಧವಾರ ಸಂಜೆ ವರದಿಯಾಗಿದೆ.

ಮೃತರನ್ನು ಆದಿಲ್, ಸಾಜಿದ್, ಅಫ್ದಾಖಾನ್ ಎಂದು ಗುರುತಿಸಲಾಗಿದ್ದು, ಪ್ರವಾಸಕ್ಕೆ ಬಂದಿದ್ದ ಮೂವರು ಭದ್ರಾ ಹಿನ್ನೀರಿನಲ್ಲಿ ತೆಪ್ಪದಲ್ಲಿ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮೂವರು ಶಿವಮೊಗ್ಗ ನಗರದ ವಿದ್ಯಾನಗರದವರು ಎನ್ನಲಾಗಿದೆ.

ಸ್ಥಳಕ್ಕೆ ವನ್ಯಜೀವಿ ವಿಭಾಗ, ಪೊಲೀಸ್, ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕರ ಮೃತದೇಹಕ್ಕಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದು, ಈ ಸಂಬಂಧ ನರಸಿಂಹರಾಜಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News