ನಮ್ಮ ʼಗ್ಯಾರಂಟಿʼ ಯೋಜನೆಗಳಿಗೆ ಐದು ವರ್ಷಗಳ ʼವ್ಯಾರಂಟಿʼ ಇದೆ : ಡಿಸಿಎಂ ಡಿ.ಕೆ. ಶಿವಕುಮಾರ್

Update: 2024-03-26 16:12 GMT

ಚಿಕ್ಕಮಗಳೂರು: "ನಮ್ಮ ಗ್ಯಾರಂಟಿ ಯೋಜನೆಗಳಿಗೆ ಐದು ವರ್ಷಗಳ ವ್ಯಾರಂಟಿ ಇದೆ. ಇದಕ್ಕೆ ಅಗತ್ಯವಾದ ಅನುದಾನವನ್ನು ಬಜೆಟ್ ನಲ್ಲಿ ಇಡಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಶೃಂಗೇರಿಯ ಗೌರಿಗದ್ದೆ ಆಶ್ರಮಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, "ಫ್ಯಾನ್, ಕುಕ್ಕರ್ ಗಳಿಗೆ ಒಂದು ವರ್ಷದ ವ್ಯಾರಂಟಿ ಇದ್ದರೆ, ನಮಗೆ ಜನ ಐದು ವರ್ಷಗಳ ವ್ಯಾರಂಟಿ ನೀಡಿದ್ದಾರೆ. ಈ ವ್ಯಾರಂಟಿಯನ್ನು 10 ವರ್ಷಗಳಿಗೆ ನೀಡುವಂತೆ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥಿಸುತ್ತಿದ್ದೇನೆ" ಎಂದರು.

ಪ್ರಯತ್ನ ವಿಫಲವಾಗಬಹುದು ಆದರೆ ಪ್ರಾರ್ಥನೆ ವಿಫಲ ಆಗುವುದಿಲ್ಲ. ಪ್ರಾರ್ಥನೆಗೆ ಫಲ ಖಂಡಿತವಾಗಿ ಸಿಗುತ್ತದೆ. ಹೀಗಾಗಿ ನಾನು ಧರ್ಮ ಯುದ್ಧ ಆರಂಭವಾಗುವ ಮುನ್ನ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ. ನಮ್ಮ ಪಕ್ಷ ಹಾಗೂ ರಾಜ್ಯದ ಜನರ ಪ್ರಾರ್ಥನೆ ಸಲ್ಲಿಸುತ್ತಿದ್ದೇನೆ. ಈ ನಾಡು ಸುಭೀಕ್ಷವಾಗಲಿ, ಒಳ್ಳೆಯ ಆಡಳಿತ ನೀಡುವ ಶಕ್ತಿ ನೀಡಲಿ ಎಂದು ಕೇಳಿಕೊಂಡಿದ್ದೇನೆ ಎಂದು ಹೇಳಿದರು.

ತಂಗಡಗಿ ಅವರನ್ನು ಲೀಡರ್ ಮಾಡುತ್ತಿದ್ದಾರೆ:

ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ಅವರು ಆಡು ಭಾಷೆಯಲ್ಲಿ ಕಪಾಳಕ್ಕೆ ಹೊಡೆಯಿರಿ ಎಂದು ಹೇಳಿರಬಹುದು. ಇದೇನು ದೊಡ್ಡ ವಿಚಾರವಲ್ಲ. ತಂಗಡಗಿ ಅವರನ್ನು ದೊಡ್ಡ ಲೀಡರ್ ಆಗಿ ಮಾಡುತ್ತಿದ್ದಾರೆ ಮಾಡಲಿ" ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News