ಶೋಭಾ ಕರಂದ್ಲಾಜೆ ಬಾರಿಯೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ : ಬಿ.ಎಸ್‌ ಯಡಿಯೂರಪ್ಪ

Update: 2024-02-25 10:14 GMT

ಚಿಕ್ಕಮಗಳೂರು: ಶೋಭಾ ಕರಂದ್ಲಾಜೆ ಅವರು ಕಳೆದ ಚುನಾವಣೆಯಲ್ಲಿ ಮೂರುವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಆದರೆ ಈ ಬಾರಿ ಅವರು ಇನ್ನೂ ಹೆಚ್ಚಿನ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ, ಅದರಲ್ಲಿ ಯಾವುದೇ ಅನುಮಾನ ಬೇಡ  ಎಂದು ಬಿ.ಎಸ್‌ ಯಡಿಯೂರಪ್ಪ ಹೇಳಿದರು.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಇದೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎನ್ನುವ ಉತ್ತಮ ವಾತಾವರಣ ಸೃಷ್ಟಿಯಾಗಿದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಸ್ಥಾನ ಗೆಲ್ಲಬೇಕು ಎಂದು ನಾವೆಲ್ಲರೂ ಶ್ರಮಿಸುತ್ತಿದ್ದೇವೆ. ಅದಕ್ಕೆ ಪೂರಕವಾದ ವಾತಾವರಣ ಇದೆ. ಅದರಲ್ಲಿ ಯಶಸ್ವಿಯಾಗುತ್ತೇವೆ. ಮುಂದಿನ ಮೂರು ದಿನಗಳಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ʼಗೋಬ್ಯಾಕ್ ಶೋಭಾʼ ಅಭಿಯಾನ ವ್ಯವಸ್ಥಿತವಾದ ಪಿತೂರಿ, ಇದರ ಹಿಂದೆ ಯಾರಿದ್ದಾರೆಂದು ಎಲ್ಲರಿಗೂ ಗೊತ್ತಿರುವ ವಿಚಾರ. ಇದರಿಂದ ಅವರು ದೃತಿಗೆಡುವುದಿಲ್ಲ ಕೇಂದ್ರದ ಸಚಿವೆಯಾಗಿ ಉತ್ತಮವಾಗಿ ಕೆಲಸ ಮಾಡಿದ್ದಾರೆಂದು ಎಲ್ಲರಿಗೂ ಗೊತ್ತಿದೆ. ಕಳೆದ ಬಾರಿಗಿಂತ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News