ಮಹಾ ಕುಂಭಮೇಳದಲ್ಲಿ ಕಾಲ್ತುಳಿತ | ಕರ್ನಾಟಕದ ಮೂಲದ ನಾಗಸಾಧು ಮೃತ್ಯು

Update: 2025-01-31 21:47 IST
ಮಹಾ ಕುಂಭಮೇಳದಲ್ಲಿ ಕಾಲ್ತುಳಿತ | ಕರ್ನಾಟಕದ ಮೂಲದ ನಾಗಸಾಧು ಮೃತ್ಯು
  • whatsapp icon

ಚಿತ್ರದುರ್ಗ : ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ನಗರದ ಬಂಜಾರ ಗುರುಪೀಠದ ನಾಗಸಾಧು ನಾಗನಾಥ್‌ ಮಹರಾಜ್‌ (48) ಅವರು ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ತಾಲ್ಲೂಕಿನ ಸಿಬಾರದಲ್ಲಿರುವ ಬಂಜಾರ ಗುರುಪೀಠದಲ್ಲಿ ನಾಗನಾಥ್‌ ಮಹರಾಜ್‌ 7 ವರ್ಷಗಳಿಂದ ವಾಸಿಸುತ್ತಿದ್ದರು. 15 ದಿನಗಳ ಹಿಂದಷ್ಟೇ ಕುಂಭಮೇಳದಲ್ಲಿ ಪಾಲ್ಗೊಳ್ಳಲು ಪ್ರಯಾಗ್‌ರಾಜ್‌ಗೆ ತೆರಳಿದ್ದರು ಎನ್ನಲಾಗಿದೆ.

ಮಹಾ ಕುಂಭಮೇಳ ಸಂಭವಿಸಿದ ಕಾಲ್ತುಳಿತದಲ್ಲಿ ಈಗಾಗಲೇ ರಾಜ್ಯದ ನಾಲ್ವರು ಮೃತಪಟ್ಟಿದ್ದು, ಇದೀಗ ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News