ದರ್ಶನ್‌ ಜೊತೆ ಮನಸ್ತಾಪ ಇರುವುದು ನಿಜ: ನಟ ಧ್ರುವ ಸರ್ಜಾ

Update: 2023-10-07 06:38 GMT

ಬೆಂಗಳೂರು: ಇತ್ತೀಚೆಗೆ ಕಾವೇರಿ ನೀರಿನ ವಿವಾದಕ್ಕೆ ಸಂಬಂಧಿಸಿ ʼಚಲನಚಿತ್ರ ವಾಣಿಜ್ಯ ಮಂಡಳಿʼ ಗುರುರಾಜ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ದರ್ಶನ್‌ ಹಾಗೂ ಧ್ರುವ ಸರ್ಜಾ ಒಂದೇ ವೇದಿಕೆಯಲ್ಲಿದ್ದರೂ ಪರಸ್ಪರ ಮಾತನಾಡಿರಲಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗಿತ್ತು. ಆ ಬಗ್ಗೆ ಖುದ್ದು ನಟ ಧ್ರುವ ಸರ್ಜಾ ಪ್ರತಿಕ್ರಿಯಿಸಿದ್ದಾರೆ. 

ಶುಕ್ರವಾರ ಮಾಧ್ಯಮಗಳಿಗೆ ಮಾತನಾಡಿದ ಅವರು, ʼʼದರ್ಶನ್ ಅವರು ನಮಗೆಲ್ಲರಿಗೂ ಹಿರಿಯ ನಟ. ದರ್ಶನ್ ಅವರ ಉಪಸ್ಥಿತಿ ಮತ್ತು ಅನುಪಸ್ಥಿತಿಯಲ್ಲೂ ಅದೇ ಗೌರವ ಇರುತ್ತೆ. ಅದರೆ ಅವರ ಬಳಿ ಕೇಳಲು ಕೆಲವು ಪ್ರಶ್ನೆಗಳಿವೆ. ಅವುಗಳನ್ನು ಅವರ ಬಳಿಯೇ ಕೇಳಬೇಕುʼʼ ಎಂದು ಹೇಳಿದರು. 

ʼʼನಾನು ಅವರೊಟ್ಟಿಗೆ ಈ ವಿಚಾರವಾಗಿ ಮಾತನಾಡುತ್ತೇನೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ಮಾಡಿಕೊಂಡು ಈ ಮನಸ್ತಾಪವನ್ನು ಬೆಳೆಸುವ ಅಗತ್ಯವಿಲ್ಲʼʼ ಎಂದು ಅವರು ಮನವಿ ಮಾಡಿದರು.

ʼʼನನ್ನಲ್ಲಿರುವ ಕೆಲವು ಗೊಂದಲ ಪ್ರಶ್ನೆಗಳಿಗೆ ಅವರಿಂದ ಉತ್ತರ ಸಿಕ್ಕಾಗ, ನನಗೆ ಎಲ್ಲವೂ ಸ್ಪಷ್ಟವಾಗುತ್ತದೆ. ಅದು ಬಿಟ್ಟು ನಾಟಕೀಯವಾಗಿ ಮನಸಲ್ಲೊಂದು ಹೊರಗೊಂದು ಥರ ಇರುವುದು ನನಗೆ ಬರುವುದಿಲ್ಲʼʼ ಎಂದು ಹೇಳಿದರು. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News