ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ಅವರ ಹುಟ್ಟುಹಬ್ಬ ಆಚರಣೆ

Update: 2023-09-14 06:46 GMT

ಬಂಟ್ವಾಳ : ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ ರಮಾನಾಥ ರೈ ಅವರ ಹುಟ್ಟುಹಬ್ಬವನ್ನು ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಬುಧವಾರ ಸಂಭ್ರಮದಿಂದ ಆಚರಿಸಿಕೊಂಡರು.


ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಹಾಗೂ ಅಲ್ಪಸಂಖ್ಯಾತ ಘಟಕದ ವತಿಯಿಂದ ಬಿ.ಸಿ. ರೋಡ್ ರಂಗೋಲಿ ಸಭಾ ಭವನದಲ್ಲಿ ರಕ್ತದಾನ ಶಿಬಿರ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ, ಪಾಣೆಮಂಗಳೂರು ಬ್ಲಾಕ್ ಮತ್ತು ಬಂಟ್ವಾಳ ಬ್ಲಾಕ್ ಇವುಗಳ ಸಹಯೋಗದೊಂದಿಗೆ ಬಂಟ್ವಾಳ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು.ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬಂಟ್ವಾಳದಲ್ಲಿ ಉಚಿತ ವೈದ್ಯಕೀಯ ಶಿಬಿರ ಹಾಗೂ ರಕ್ತದಾನ ಶಿಬಿರನಡೆಯಿತು. 


ರಮಾನಾಥ ರೈ ಅವರ ಪ್ರಯತ್ನದಿಂದ ವಿಧಾನ ಪರಿಷತ್ ಸದಸ್ಯ ಯು‌.ಬಿ. ವೆಂಕಟೇಶ್ ಅವರ ಪ್ರದೇಶಾಭಿವೃದ್ಧಿ ಯೋಜನೆಯಡಿ ಬಂಟ್ವಾಳ-ಬೈಪಾಸಿನಲ್ಲಿ ನಿರ್ಮಾಣಗೊಂಡ ಅಟೋ ರಿಕ್ಷಾ ನಿಲ್ದಾಣವನ್ನು ಇಲ್ಲಿನ ಅಟೋ ಚಾಲಕ-ಮಾಲಕ ಸಂಘದ ವತಿಯಿಂದ ಉದ್ಘಾಟಿಸಲಾಯಿತು. ಸಜಿಪ ಮೂಡ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ವೈದ್ಯಕೀಯ ಶಿಬಿರ ಹಾಗೂ ರಕ್ತದಾನ ಶಿಬಿರ ಹಮ್ಮಿಕೊಳ್ಳುವ ಮೂಲಕ ರಮಾನಾಥ ರೈಗಳ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು.

ರಮಾನಾಥ ರೈ ಅಭಿಮಾನಿಗಳು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.





 


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News