ಬಂಟ್ವಾಳ: ಕಂಟೈನರ್ ಲಾರಿ - ಖಾಸಗಿ ಬಸ್ ಮಧ್ಯೆ ಅಪಘಾತ: ಓರ್ವನಿಗೆ ಗಂಭೀರ ಗಾಯ

Update: 2024-03-09 04:25 GMT

ಬಂಟ್ವಾಳ, ಮಾ.9: ಕಂಟೈನರ್ ಲಾರಿ ಮತ್ತು ಖಾಸಗಿ ಬಸ್ಸೊಂದರ ನಡುವೆ ಸಂಭವಿಸಿದ ಅಪಘಾತದಲ್ಲಿ ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ಕಾಲೇಜು ರಸ್ತೆಯ ವೈದ್ಯನಾಥ ದೇವಸ್ಥಾನದ ಮುಂಭಾಗದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಗಾಯಾಳು ಲಾರಿ ಚಾಲಕನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾದೆ. ಉಳಿದಂತೆ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಅನೇಕ ಪ್ರಯಾಣಿಕರಿದ್ದು, ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಬಿ.ಸಿ.ರೋಡಿನಿಂದ ಮೂಡುಬಿದಿರೆಯ ಕಡೆಗೆ ಹೋಗುತ್ತಿದ್ದ ಕಂಟೈನರ್ ಹಾಗೂ ಮೂಡುಬಿದಿರೆಯಿಂದ ಬಂಟ್ವಾಳದತ್ತ ಬರುತ್ತಿದ್ದ ಖಾಸಗಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News