ಬಿ.ಸಿ.ರೋಡ್ | ಕಾರಿಗೆ ಬಸ್ ಢಿಕ್ಕಿ: ಕಾರು ಚಾಲಕನಿಗೆ ಗಂಭೀರ ಗಾಯ

Update: 2025-03-05 14:44 IST
ಬಿ.ಸಿ.ರೋಡ್ | ಕಾರಿಗೆ ಬಸ್ ಢಿಕ್ಕಿ: ಕಾರು ಚಾಲಕನಿಗೆ ಗಂಭೀರ ಗಾಯ
  • whatsapp icon

ಬಿ.ಸಿ.ರೋಡ್: ಖಾಸಗಿ ಬಸ್ ಮತ್ತು ಕಾರೊಂದರ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡಿನ ಸರ್ಕಲ್ ಬಳಿ ಬುಧವಾರ ನಡೆದಿದೆ.

ಗಾಯಾಳುವನ್ನು ಕಾರು ಚಾಲಕ ಕೇರಳ ಮೂಲದ ವಿಶ್ವನಾಥ ಶೆಟ್ಟಿ ಎಂದು ಗುರುತಿಸಲಾಗಿದೆ.

ಬಿ.ಸಿ.ರೋಡಿನ ಕಡೆಯಿಂದ ಮೆಲ್ಕಾರ್ ನತ್ತ ಹೋಗುತ್ತಿದ್ದ ವಿಶ್ವನಾಥ ಅವರ ಕಾರಿಗೆ ಮೆಲ್ಕಾರ್-ಪಾಣೆಮಂಗಳೂರು ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ.

ಘಟನೆಯ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News