ಬೆಳ್ತಂಗಡಿ: ಮನೆಗೆ ನುಗ್ಗಿ ನಗ, ನಗದು ಕಳವು; ಪ್ರಕರಣ ದಾಖಲು

Update: 2024-02-07 09:02 GMT

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಮನೆ ಹಂಚು ತೆಗೆದು ಒಳನುಗ್ಗಿ ಕಪಾಟಿನಲ್ಲಿರಿಸಿದ್ದ ರೂ 1,71,000 ಮೌಲ್ಯದ ಚಿನ್ನಾಭರಣ ಹಾಗೂ ನಗದು ರೂ 1,20,000/- ಹಣವನ್ನು ಕಳವು ಮಾಡಿರುವ  ಘಟನೆ ಕಡಿರುದ್ಯಾವರದಲ್ಲಿ ಸೋಮವಾರ ತಡರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬೆಳ್ತಂಗಡಿ ತಾಲೂಕು ಕಡಿರುದ್ಯಾವರ ಗ್ರಾಮದ ಮುಸ್ತಫಾ (30) ಎಂಬವರು  ಫೆ.05 ರಂದು ತನ್ನ  ಗೂಡ್ಸ್‌ ವಾಹನದ ಸರ್ವಿಸ್ ಗಾಗಿ ಚಿಕ್ಕಮಗಳೂರಿಗೆ ತೆರಳಿದ್ದರು. ಮನೆಯಲ್ಲಿದ್ದ ಅವರ ತಾಯಿ ಕೂಡಾ ರಾತ್ರಿ ವೇಳೆ, ಮನೆಗೆ ಬೀಗ ಹಾಕಿ ಹತ್ತಿರದಲ್ಲಿರುವ ಚಿಕ್ಕಪ್ಪನ ಮನೆಗೆ ತೆರಳಿದ್ದರು. ಮರುದಿನ ಮಂಗಳವಾರ ದಂದು ಬೆಳಿಗ್ಗೆ ತಾಯಿ ಮನೆಗೆ ಬಂದು ನೋಡಿದಾಗ ಮನೆಯ ಹಂಚು ತೆರೆದು ಯಾರೋ ಕಳ್ಳರು ಒಳಪ್ರವೇಶಿಸಿ ರೂಮಿನಲ್ಲಿ ಕಪಾಟಿನಲ್ಲಿರಿಸಲಾಗಿದ್ದ 1,71,000ಮೌಲ್ಯದ ಚಿನ್ನಾಭರಣ ಹಾಗೂ 1,20,000 ನಗದನ್ನು ಅಪಹರಿಸಿರುವು ಎನ್ನುವುದು ಗೊತ್ತಾಗಿದೆ.

ಈ ಬಗ್ಗೆ ಮುಸ್ತಫಾ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News