ಬೆಳ್ತಂಗಡಿ: ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಕಡವೆ ಬೇಟೆ; ಬಂದೂಕು ಸಹಿತ ಮೂವರ ಬಂಧನ

Update: 2023-08-23 15:41 GMT

ಬೆಳ್ತಂಗಡಿ: ಪಟ್ರಮೆ ಗ್ರಾಮದ ದಡಂತಮಲೆ ಮೀಸಲು ಅರಣ್ಯದ ಒಳಭಾಗದ ಬಟ್ಟಾಡಿ ಎಂಬಲ್ಲಿ ಕಪಿಲಾ ನದಿ ತೀರದಲ್ಲಿ ಕಡವೆ ಬೇಟೆ ಮಾಡಿದ ಮೂವರನ್ನು ಬಂದೂಕು ಸಹಿತ ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತರನ್ನು ಸುದೇಶ್ ಪಟ್ರಮೆ, ಪುನೀತ್, ಕೋಟ್ಯಪ್ಪ ಗೌಡ ಎಂದು ಗುರುತಿಸಲಾಗಿದ್ದು, ಈ ಸಂದರ್ಭ ಲೋಕೇಶ್ ಎಂಬಾತ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಪ್ಪಿನಂಗಡಿ ಅರಣ್ಯ ಇಲಾಖೆ ವ್ಯಾಪ್ತಿಯ ದಡಂತಮಲೆ ಬಟ್ಟಾಡಿ ಕಪಿಲ ನದಿ‌ ಪಕ್ಕದಲ್ಲಿ ಕಡವೆಯನ್ನು ಆರೋಪಿಗಳು ಮಂಗಳವಾರ ರಾತ್ರಿ ಬೇಟೆಯಾಡಿದ ಪ್ರಕರಣ ಅರಣ್ಯ ಇಲಾಖೆಯ ರಾತ್ರಿ ಗಸ್ತು ಸಿಬ್ಬಂದಿ ಗಮನಕ್ಕೆ ಬಂದಿತ್ತು. 

ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News