ಭಾರೀ ಮಳೆಗೆ ಚಾರ್ಮಾಡಿ ಘಾಟ್‌ ನಲ್ಲಿ ಗುಡ್ಡ ಕುಸಿತ; ಟ್ರಾಫಿಕ್ ಜಾಮ್

Update: 2024-07-27 05:39 GMT

ಬೆಳ್ತಂಗಡಿ: ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದಿದ್ದು, ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಸಂಭವಿಸಿರುವ ಬಗ್ಗೆ ವರದಿಯಾಗಿದೆ.

ಚಾರ್ಮಾಡಿ ಘಾಟಿಯ ಹತ್ತನೆಯ ತಿರುವಿನ ಸಮೀಪನ ಉಂಟಾದ ಗುಡ್ಡ ಕುಸಿತದಿಂದಾಗಿ  ನೂರಾರು ಸಂಖ್ಯೆಯಲ್ಲಿ ವಾಹನಗಳು ಅಲ್ಲಲ್ಲಿ ಗಂಟೆಗಟ್ಟಲೆ ಕಾಯಬೇಕಾದ  ಪರಿಸ್ಥಿತಿಯುಂಟಾಗಿತ್ತು.

ರಾತ್ರಿ ವೇಳೆ ಭೂ ಕುಸಿತವಾಗಿದ್ದು ಸ್ಥಳೀಯರ ಸಹಕಾರದೊಂದಿಗೆ ಮಣ್ಣು ಹಾಗೂ ಕಲ್ಲುಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಲಾಯಿತು.

ಭೂ ಕುಸಿತದಿಂದಾಗಿ ಕೆಲ ಗಂಟೆಗಳ ಕಾಲ ಘಾಟಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಯುಂಟಾಯಿತು. ನೂರಾರು ವಾಹನಗಳು ಘಾಟಿಯಲ್ಲಿ ಹಾಗೂ ಕೊಟ್ಟಿಗೆ ಹಾರದಲ್ಲಿ ಕಾಯಬೇಕಾಯಿತು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News