ಕರ್ನಾಟಕದಿಂದ ಕೇರಳಕ್ಕೆ ಅಕ್ರಮ ಮದ್ಯ ಸಾಗಾಟ; ಓರ್ವನ ಬಂಧನ

Update: 2023-09-02 10:06 GMT

ಮಂಜೇಶ್ವರ : ಕರ್ನಾಟಕದಿಂದ ಕೇರಳಕ್ಕೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಮಂಗಳೂರು ನಿವಾಸಿಯನ್ನು ಮಂಜೇಶ್ವರ ಅಬಕಾರಿ ದಳದ ಸಿಬಂದಿಗಳು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಮಂಗಳೂರು ಗೋರಿಗುಡ್ಡೆ ಲೋಬೊ ಕಂಪೌಂಡ್ ನ ಬಾಲಕೃಷ್ಣ ( 50) ಎಂದು ಗುರುತಿಸಲಾಗಿದೆ.

ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಕಾರನ್ನು ತಡೆದು ಪರಿಶೀಲಿಸಿದಾಗ ಬಾಕ್ಸ್ ಗಳಲ್ಲಿ ತುಂಬಿಸಿದ್ದ ಸುಮಾರು 2400 ಪ್ಯಾಕೆಟ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಈತ ಕುಂಬಳೆ ಕಡೆಗೆ ಮದ್ಯ ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ.


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News