ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಸ್ವಾತಂತ್ರ್ಯೋತ್ಸವ

Update: 2024-08-15 17:13 GMT

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ( ಎಸ್ ಸಿ ಡಿಸಿಸಿ ಬ್ಯಾಂಕ್ )ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು.

ಕೊಡಿಯಾಲ್ ಬೈಲ್‌ನಲ್ಲಿರುವ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಸ್ವಾತಂತ್ರ್ಯೋತ್ಸವದ ದಿನ ಶಾಂತಿ , ಏಕತೆ ಮತ್ತು ಧೈರ್ಯವನ್ನು ಪ್ರತಿಬಿಂಬಿ ಸುವ ತ್ರಿವರ್ಣ ಧ್ವಜವು ಹೆಮ್ಮೆಯಿಂದ ಆಕಾಶದೆತ್ತರದಲ್ಲಿ ಹಾರುತ್ತದೆ. ಇಂತಹ ಸ್ಮರಣೀಯ ಪರ್ವ ಕಾಲದಲ್ಲಿ ದೇಶದ ವೀರ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವುದರ ಜೊತೆಗೆ ನಾವೆಲ್ಲರೂ ದೇಶದ ಏಕತೆ ಹಾಗೂ ಅಖಂಡತೆಯನ್ನು ಉಳಿಸಲು ಪಣ ತೊಡಬೇಕು ಎಂದು ಹೇಳಿದರು.

ಪ್ರೀತಿ, ಸಹೋದರತೆ ಮತ್ತು ಒಗ್ಗಟ್ಟಿನಿಂದ ಸಿಬ್ಬಂದಿಗಳು ಬ್ಯಾಂಕಿನ ಕಾರ್ಯದಲ್ಲೂ ಸಂಘಟನಾತ್ಮಕವಾಗಿ ದುಡಿದು ಬ್ಯಾಂಕನ್ನು ಅಭಿವೃದ್ಧಿಯ ಪಥದತ್ತ ಮುನ್ನಡೆಸಬೇಕೆಂದರು .

ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರು, ಹಾಗೂ ಮುಡಾ ಅಧ್ಯಕ್ಷರಾದ ಸದಾಶಿವ ಉಳ್ಳಾಲ್, ನಿರ್ದೇಶಕ ಜೈರಾಜ್ ಬಿ. ರೈ, ದಕ್ಷಿಣ ಕನ್ನಡ ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್. ಎನ್. ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್ ಹಾಗೂ ಬ್ಯಾಂಕಿನ ಹಿರಿಯ - ಕಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News