ಜೋಕಟ್ಟೆ: ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು

Update: 2023-07-15 09:41 GMT

ಸುರತ್ಕಲ್: ಮೀನು ಹಿಡಿಯಲೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಮುಳುಗಿ ಮೃತಪಟ್ಟಿರುವ ಘಟನೆ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತೋಕೂರು ಗುತ್ತು ಎಂಬಲ್ಲಿ ಶನಿವಾರ ನಡೆದಿರುವ ಬಗ್ಗೆ ವರದಿಯಾಗಿದೆ.

ಮೃತಪಟ್ಟವರನ್ನು ಬಜ್ಪೆ ಜೋಕಟ್ಟೆ ಸಮೀಪದ ಪೋರ್ಕೊಡಿ ನಿವಾಸಿ ಪೂವಪ್ಪ(40) ಎಂದು ಗುರುತಿಸಲಾಗಿದೆ.

ಪೂವಪ್ಪ ಅವರು ತನ್ನ ಸಹೋದರರೊಂದಿಗೆ ಜೋಕಟ್ಟೆ 62ನೇ ತೋಕೂರಿನ ಜಾರಂದಾಯ ದೈವಸ್ಥಾನದ ಗುತ್ತಿನ ಮನೆಗೆ ಸಮೀಪದಲ್ಲಿ ಮೀನು ಹಿಡಿಯುತ್ತಿದ್ದರು ಎನ್ನಲಾಗಿದೆ. ಈ ವೇಳೆ ಪೂವಪ್ಪ ಅವರು ನೀರಿಗೆ ಇಳಿದ ಅವರು ಕೆಸರಿನಲ್ಲಿ ಹೋತು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟರೆಂದು ಅವರ ಸಹೋದರ ಪಣಂಬೂರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News