ಕುಂದಾಪುರ: ಟೇಬಲ್ ಟೆನಿಸ್ ತಂಡ ರಾಜ್ಯಮಟ್ಟಕ್ಕೆ

Update: 2024-09-03 15:42 GMT

ಕುಂದಾಪುರ, ಸೆ.3: ಪದವಿ ಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಅಗ್ರಸ್ಥಾನ ಪಡೆದ ಕುಂದಾಪುರದ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ರಾಜ್ಯಮಟ್ಟದಲ್ಲಿ ಸ್ಪರ್ಧಿಸುವ ಅರ್ಹತೆಯನ್ನು ಪಡೆದುಕೊಂಡಿದೆ.

ಆರ್.ಎನ್.ಶೆಟ್ಟಿ ಪ.ಪೂ.ಕಾಲೇಜಿನ ವಿಜ್ಞಾನ ವಿಭಾಗದ ಕ್ಷಮಾ ಗೌತಮ್, ಅಂಕಿತಾ ಹಾಗೂ ವಾಣಿಜ್ಯ ವಿಭಾಗದ ದೀಪ್ತಿ ಅವರು ವಿಜಯಿ ತಂಡದ ಸದಸ್ಯರಾಗಿದ್ದು, ಇನ್ನು ರಾಜ್ಯಮಟ್ಟದಲ್ಲಿ ಸ್ಪರ್ಧಿಸುವ ಅವಕಾಶ ಪಡೆದುಕೊಂಡಿದ್ದಾರೆ.

ರಾಜ್ಯಮಟ್ಟಕ್ಕೆ ಆಯ್ಕೆಯಾದ ಟೇಬಲ್ ಟೆನಿಸ್ ತಂಡದ ವಿದ್ಯಾರ್ಥಿನಿ ಯರನ್ನು ಕಾಲೇಜಿನ ಸಂಚಾಲಕ ಬಿ.ಎಂ. ಸುಕುಮಾರ್ ಶೆಟ್ಟಿ, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು ಅಭಿನಂದಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News